ಸಂಗ್ರಹ ಚಿತ್ರ 
ರಾಜ್ಯ

BWSSBಗೆ ಪ್ರತಿಷ್ಠಿತ ಗರಿ: ಸುಸ್ಥಿರ ನಗರ ನೀರು ನಿರ್ವಹಣೆಗೆ ವಿಶ್ವ ಜಲ 2025 ಪ್ರಶಸ್ತಿ!

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ.

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ವಿಶ್ವ ಜಲ 2025 ಪ್ರಶಸ್ತಿಯನ್ನು ಸ್ವೀಕರಿಸಲಿದೆ. BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಈ ಮನ್ನಣೆಯು ಬೆಂಗಳೂರಿಗೆ ಜಲ-ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸಿಕೊಳ್ಳುವಲ್ಲಿ ನಮ್ಮ ಪ್ರಯತ್ನಗಳನ್ನು ಮುಂದುವರಿಸಲು ನಮಗೆ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದರು.

ಯುನೆಸ್ಕೋ ಸಹಯೋಗದೊಂದಿಗೆ ನೀಡಲಾಗುವ ಈ ಪ್ರಶಸ್ತಿಗಳು, ಸಂಸ್ಥೆಗಳು, ಎನ್‌ಜಿಒಗಳು ಮತ್ತು ವ್ಯಕ್ತಿಗಳು ನೀರಿನ ಸಂಸ್ಕರಣೆ, ಮರುಬಳಕೆ ಮತ್ತು ಸಂರಕ್ಷಣೆಯಲ್ಲಿ ಮಾಡಿದ ಅಸಾಧಾರಣ ಪ್ರಯತ್ನಗಳನ್ನು ಗುರುತಿಸುತ್ತವೆ. BWSSB ಸುಸ್ಥಿರ ನಗರ ನೀರು ಸರಬರಾಜು ಮತ್ತು ನಿರ್ವಹಣೆಗೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಪ್ರಶಸ್ತಿಯನ್ನು ಪಡೆಯುತ್ತಿದೆ.

ಮನೋಹರ್ ಅವರ ಪ್ರಕಾರ, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು 23 ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸುವುದು, ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಅಂತರ್ಜಲ ಕಾರ್ಯಪಡೆಯನ್ನು ಸ್ಥಾಪಿಸಿರುವುದು ಮತ್ತು 3,000 ಮಳೆನೀರು ಕೊಯ್ಲು ಟ್ಯಾಂಕ್‌ಗಳನ್ನು ನಿರ್ಮಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ BWSSB ಗೆ ಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT