ರಾಜ್ಯ

ರಾಯಚೂರು: ಪತ್ನಿಗೆ ಕೈಕೊಟ್ಟು ಸುಂದರಿ ಹಿಂದೆ ಬಿದ್ದು 2ನೇ ಮದ್ವೆ; ಜೀವನಾಂಶ ಕೇಳಿದ್ದಕ್ಕೆ ಮೊದಲ ಹೆಂಡ್ತಿಗೆ ಮಚ್ಚಿನೇಟು!

ಮೊದಲ ಪತ್ನಿಗೆ ಕೈಕೊಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಯೋರ್ವ ಇದೀಗ ಮೊದಲ ಪತ್ನಿಗೆ ಮೇಲೆ ಮಚ್ಚಿನಿಂದ ದಾಳಿ ಮಾಡಿರುವ ಘಟನೆ ರಾಯಚೂರಿನ ಏಗನೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರು: ಮೊದಲ ಪತ್ನಿಗೆ ಕೈಕೊಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಯೋರ್ವ ಇದೀಗ ಮೊದಲ ಪತ್ನಿಗೆ ಮೇಲೆ ಮಚ್ಚಿನಿಂದ ದಾಳಿ ಮಾಡಿರುವ ಘಟನೆ ರಾಯಚೂರಿನ ಏಗನೂರು ಗ್ರಾಮದಲ್ಲಿ ನಡೆದಿದೆ. ಬೈಕ್​ನಲ್ಲಿ ಬಂದ ತಿಮ್ಮಪ್ಪ ಪತ್ನಿ ಪದ್ಮಾವತಿ ಹಾಗೂ ನಾದಿನಿ ಭೂದೇವಿ ಮೇಲೆ ಮಚ್ಚಿನಿಂದ ಮನಬಂದಂತೆ ದಾಳಿ ಮಾಡಿದ್ದಾನೆ. ಈ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ಜನ ಬೆಚ್ಚಿಬಿದ್ದಿದ್ದಾರೆ. ತಿಮ್ಮಪ್ಪ ಎರಡನೇ ಮದುವೆಯಾಗಿದ್ದ ಹೀಗಾಗಿ ಪದ್ಮಾವತಿ ಕೋರ್ಟ್​ ಮೊರೆ ಹೋಗಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಜೀವನಾಂಶ ನೀಡುವಂತೆ ಕೋರ್ಟ್ ಸಹ ತಿಮ್ಮಪ್ಪಗೆ ಸೂಚಿಸಿತ್ತು. ಆದರೆ ಜೀವನಾಂಶ ಕೊಡದಿದ್ದರಿಂದ ಜೈಲು ಸೇರಿದ್ದನು. ಅಲ್ಲದೆ ಜೈಲಿನಿಂದ ಹೊರ ಬಂದ ಬಳಿಕ ಪತ್ನಿಗೆ ಹಿಂಸೆ ಕೊಡಲಾರಂಭಿಸಿದ್ದಾನೆ. ಅಲ್ಲದೆ ಪತ್ನಿ ಮತ್ತು ನಾದಿನಿ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದರಿಂದ ಪದ್ಮಾವತಿಯ ಕೈ ಬೆರಳುಗಳು ತುಂಡಾಗಿವೆ. ಭೂದೇವಿಯ ಮುಂಗೈ ತುಂಡಾಗಿದ್ದು ಸದ್ಯ ರಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?

'ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಮನೆ ಊಟ, ಕೋರಿಕೆ ಮೇರೆಗೆ ಅಲ್ಲ': ಪವಿತ್ರಾಗೌಡ ಅಂಡ್ ಟೀಂಗೆ HighCourt ಶಾಕ್!

ಖಾಲಿ ಹುದ್ದೆಗಳ ಭರ್ತಿಗೆ SC ಒಳ ಮೀಸಲಾತಿ ಪರಿಗಣಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

SCROLL FOR NEXT