ಸಾಂದರ್ಭಿಕ ಚಿತ್ರ  
ರಾಜ್ಯ

'ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ': ನಾಡಿನೆಲ್ಲೆಡೆ ವಿಶ್ವಾವಸು ಸಂವತ್ಸರದ ಆಚರಣೆ, ಹಬ್ಬದ ಸಂಭ್ರಮ

ಈ ವರ್ಷ ಮಳೆ-ಬೆಳೆ ಚೆನ್ನಾಗಿ ಆಗಿ ನಾಡಿನಾದ್ಯಂತ ಸಮೃದ್ಧಿ ತರಲಿ, ಯಾವುದೇ ಪ್ರಕೃತಿ ವಿಕೋಪಗಳು ಘಟಿಸದೆ ಇರಲಿ ಎಂದು ಜನರು ಆಶಿಸುತ್ತಿದ್ದಾರೆ.

ಬೆಂಗಳೂರು: ನಾಡಿನಾದ್ಯಂತ ಇಂದು ಶ್ರೀ ವಿಶ್ವಾವಸು ನಾಮ ಸಂವತ್ಸರದ ಯುಗಾದಿ ಹಬ್ಬದ ಸಂಭ್ರಮ, ಮುಂಜಾನೆಯಿಂದ ಮಕ್ಕಳು, ತಾಯಂದಿರು ಮನೆಯನ್ನು ಸಾರಿಸಿ ರಂಗೋಲಿ ಬಳಿದು ಸ್ನಾನ ಮಾಡಿ ಯುಗಾದಿ ಹಬ್ಬದ ಪೂಜೆಗೆ ಸಿದ್ಧತಿ ನಡೆಸುತ್ತಿದ್ದಾರೆ.

ಅದರ ಜೊತೆಗೆ ಯುಗಾದಿ ಹಬ್ಬದ ಅಡುಗೆ ಸಿದ್ದವಾಗುತ್ತಿದೆ. ದೇವಸ್ಥಾನಗಳಲ್ಲಿ ಸಹ ಬೆಳಗ್ಗೆಯಿಂದಲೇ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ನೆರವೇರುತ್ತಿವೆ. ''ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ.. ಮತ್ತೆ ಯುಗಾದಿ ಬಂದಿದೆ. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು.ದೇವರು ಸರ್ವರಿಗೂ ಆಯುರಾರೋಗ್ಯ, ಸಂಪತ್ತು, ಶಾಂತಿ, ಸಮೃದ್ಧಿ ಕರುಣಿಸಲಿ. ಈ ವರ್ಷ ಸಂತೋಷದ ಹೊನಲಾಗಲಿ,'' ಎಂದು ಯುಗಾದಿ ಶುಭಾಶಯಗಳು ಹರಿದುಬರುತ್ತಿವೆ.

ಪೂಜೆಗೆ ಶ್ರೇಷ್ಠ ಸಮಯ

ಈ ವರ್ಷ ಮಳೆ-ಬೆಳೆಗಳು ಚೆನ್ನಾಗಿ ಆಗಿ ಸಮೃದ್ಧಿ ತರಲಿ, ಯಾವುದೇ ಪ್ರಕೃತಿ ವಿಕೋಪಗಳು ಘಟಿಸದೆ ಇರಲಿ ಎಂದು ಜನರು ಆಶಿಸುತ್ತಿದ್ದಾರೆ.

ಚಳಿಗಾಲ ಕಳೆದು ಬೇಸಿಗೆ ವಸಂತ ಋತುವಿನ ಆಗಮನ ಹೊತ್ತಿನಲ್ಲಿ ಪ್ರಕೃತಿಯಲ್ಲಿ ಚಿಗುರಿ ಫಲಗಳು ಸಿಗುವ ಹೊತ್ತಿನಲ್ಲಿ ಯುಗಾದಿ ಆಚರಿಸುತ್ತಿದ್ದು, ದಕ್ಷಿಣ ಭಾರತೀಯರಲ್ಲಿ ಇದರ ಆಚರಣೆ ಹೆಚ್ಚು. ಉತ್ತರ ಭಾರತೀಯರು ಈ ದಿನವನ್ನು ಚೈತ್ರ ನವರಾತ್ರಿಯ ಮೊದಲ ದಿನವೆಂದು ಆಚರಿಸುತ್ತಾರೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಮಹಾರಾಷ್ಟ್ರ ಕಡೆ ಗುಡಿ ಪಾಡ್ವ ಎಂದು ಕರೆಯುತ್ತಾರೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ನಾಡಿ ನ ಜನತೆಗೆ ಶುಭಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT