ರಿಜ್ವಾನ್ ಅರ್ಷದ್ 
ರಾಜ್ಯ

ಸರ್ಕಾರಿ ಪಶು ಆಸ್ಪತ್ರೆ ಆವರಣವನ್ನು ಸಾಕುಪ್ರಾಣಿಗಳ ಚಿತಾಗಾರವಾಗಿ ಬಳಸಬಹುದು: ರಿಜ್ವಾನ್ ಅರ್ಷದ್

ಮನುಷ್ಯರಂತೆ ಪ್ರಾಣಿಗಳು ಸತ್ತಾಗ ಕೂಡ ಅವುಗಳಿಗೆ ಗೌರವಯುತ ವಿದಾಯ ಹೇಳಬೇಕು.

ಬೆಂಗಳೂರು: ದಾಸರಹಳ್ಳಿ ಮತ್ತು ಬ್ಯಾಟರಾಯನಪುರ ಕ್ಷೇತ್ರಗಳಲ್ಲಿರುವಂತೆಯೇ ಇತರೆ ಪ್ರದೇಶಗಳಲ್ಲಿರುವ ಸರ್ಕಾರಿ ಪಶು ಆಸ್ಪತ್ರೆ ಆವರಣವನ್ನು ಸಾಕುಪ್ರಾಣಿಗಳ ಚಿತಾಗಾರವಾಗಿ ಬಳಸಬಹುದು ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರು ಹೇಳಿದ್ದಾರೆ.

ಸಾಕು ಪ್ರಾಣಿಗಳ ಚಿತಾಗಾರ ಕೊರತೆಯಿಂದಾಗಿ ಸತ್ತ ಪ್ರಾಣಿಗಳನ್ನು ಕಸದ ತೊಟ್ಟಿಯಲ್ಲಿ ಎಸೆಯುವಂತಹ ಬೆಳವಣಿಗೆಗಳು ಕಂಡು ಬರುತ್ತಿವೆ. ಮನುಷ್ಯರಂತೆ ಪ್ರಾಣಿಗಳು ಸತ್ತಾಗ ಕೂಡ ಅವುಗಳಿಗೆ ಗೌರವಯುತ ವಿದಾಯ ಹೇಳಬೇಕು. ಹೀಗಾಗಿ, ಸರ್ಕಾರಿ ಪಶು ಆಸ್ಪತ್ರೆ ಆವರಣವನ್ನು ಸಾಕುಪ್ರಾಣಿಗಳ ಚಿತಾಗಾರವಾಗಿ ಬಳಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ನಾಯಿ ಕಾರ್ನೀವಲ್ ಮತ್ತು ಸಮುದಾಯ ನಿಧಿಸಂಗ್ರಹಣೆ ಕಾರ್ಯಕ್ರಮದಲ್ಲಿ ರಿಜ್ವಾನ್ ಅವರು ಮಾತನಾಡಿದರು. ಬೆಂಗಳೂರು ಮೂಲದ ಸಿಜೆ ಮೆಮೋರಿಯಲ್ ಟ್ರಸ್ಟ್‌ನ ವಿಭಾಗವಾದ ಉಲ್ಸೂರ್ ಕೆನೈನ್ ಸ್ಕ್ವಾಡ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಸಿಜೆ ಮೆಮೋರಿಯಲ್ ಟ್ರಸ್ಟ್‌ನ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕ ಟ್ರಸ್ಟಿ ಪ್ರಿಯಾ ಚೆಟ್ಟಿ ರಾಜಗೋಪಾಲ್ ಅವರು ಮಾತನಾಡಿ, ಬೆಂಗಳೂರಿನಾದ್ಯಂತ 4,500 ಕ್ಕೂ ಹೆಚ್ಚು ಜನರನ್ನು ಒಳಗೊಂಡ 65 ಸ್ಕ್ವಾಡ್‌ಗಳು ನಗರದಲ್ಲಿ ಪ್ರಾಣಿ-ಮಾನವ ಸಹಬಾಳ್ವೆಯನ್ನು ಉತ್ತೇಜಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT