ಬೆಂಗಳೂರು: ಮಾ. 31 ರಂಜಾನ್ ಹಬ್ಬದಂದು ಬಿಬಿಎಂಪಿಯ ಅಧಿಕಾರಿಗಳು, ಸಿಬ್ಬಂದಿಗಳ ರಜೆ ರದ್ದುಗೊಳಿಸಲಾಗಿದೆ.
ಈ ಸಂಬಂಧ ಬಿಬಿಎಂಪಿ ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್ ಅವರು ಆದೇಶ ಹೊರಡಿಸಿದ್ದಾರೆ. ಆಸ್ತಿ ತೆರಿಗೆ ಪಾವತಿಗೆ ಮಾರ್ಚ್ 31 ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ ಸಿಬ್ಬಂದಿಯ ಯುಗಾದಿ ಮತ್ತು ರಂಜಾನ್ ರಜೆಯನ್ನು ರದ್ದು ಮಾಡಲಾಗಿದೆ.
ಸರ್ಕಾರಿ ಕಟ್ಟಡಗಳ ಒಟಿಎಸ್ ಪಾವತಿಗೂ ಮಾರ್ಚ್ 31 ಡೆಡ್ ಲೈನ್ ಆಗಿದೆ. ಹೀಗಾಗಿ ತೆರಿಗೆ ಪಾವತಿದಾರರಿಗೆ ಅನುಕೂಲವಾಗಲೆಂದು ಕ್ರಮ ಕೈಗೊಳ್ಳಲಾಗಿದೆ. ಕಂದಾಯ ವಿಭಾಗದ ಎಲ್ಲರೂ ಕೆಲಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.