ಸಾಂದರ್ಭಿಕ ಚಿತ್ರ 
ರಾಜ್ಯ

ಯುಗಾದಿ ಹಬ್ಬದ ದಿನವೇ ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ಕೃಷ್ಣಾ ನದಿಯಲ್ಲಿ ಮುಳುಗಿ ಸಾವು

ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.

ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ.

ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.

ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel