ಕತ್ರಿಗುಪ್ಪೆಯಲ್ಲಿ ಮರ ಬಿದ್ದು ಆಟೋ ಚಾಲಕ ಸಾವು! 
ರಾಜ್ಯ

Heavy rains in Bengaluru: ಕತ್ರಿಗುಪ್ಪೆಯಲ್ಲಿ ಮರ ಬಿದ್ದು ಆಟೋ ಚಾಲಕ ಸಾವು!

ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿದಿದ್ದು, ಮರ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಧಾರುಣ ಘಟನೆ ವರದಿಯಾಗಿದೆ.

ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕತ್ರಿಗುಪ್ಪೆಯ ಎಂ.ಎಂ.ಬಾರ್​ ಬಳಿ ಘಟನೆ ನಡೆದಿದ್ದು, ಮಳೆ ಮತ್ತು ಗಾಳಿಯಿಂದಾಗಿ ಬೃಹತ್ ಮರ ಉರುಳಿ ತುಂಡಾಗಿ ಆಟೋ ಮೇಲೆ ಬಿದ್ದಿದೆ. ಪರಿಣಾಮ ಆಟೋ ಚಾಲಕ ಮಹೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅದೃಷ್ಟವಶಾತ್, ಆ ಸಂದರ್ಭದಲ್ಲಿ ಆಟೋದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಿಕೆ ಅಚ್ಚುಕಟ್ಟು ಬಳಿಯ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಟ್ಟಮಡು ಮೂಲದ ಆಟೋ ಚಾಲಕ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಜೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT