ಬೆಂಗಳೂರಿನಲ್ಲಿ ಭಾರಿ ಮಳೆ 
ರಾಜ್ಯ

Heavy rains in Bengaluru: ಬೆಂಗಳೂರಿನಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ಥ; ಇನ್ನೂ 3 ದಿನ ವರ್ಷಧಾರೆ ಸಾಧ್ಯತೆ

ಬೆಂಗಳೂರಿನಲ್ಲಿ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದ್ದು, ಇಂದೂ ಸಹ ರಾತ್ರಿ ಭಾರಿ ಮಳೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿದಿದ್ದು, ರಾತ್ರಿ 8 ಗಂಟೆ ಸುಮಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಇಂದು ಸಂಜೆ ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು. ಈ ಎಚ್ಚರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದ್ದು, ಇಂದೂ ಸಹ ರಾತ್ರಿ ಭಾರಿ ಮಳೆಯಾಗಿದೆ.

ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್​, ಕೆ.ಆರ್.ಮಾರ್ಕೆಟ್​, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಗಾಳಿ, ಮಳೆಗೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ನಗರ ಹಲವು ರಸ್ತೆಗಳಲ್ಲಿ ನಿಧಾನಗತಿಯ ಸಂಚಾರವಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಭಾರಿ ಮಳೆ

ಇನ್ನು ಇಂದು ನಗರದ ಹಲವೆಡೆ ಭಾರಿ ಮಳೆಯಾಗಿದ್ದು, ಬೆಂಗಳೂರಿನ ಹಂಪಿನಗರದಲ್ಲಿ 55, ರಾಜರಾಜೇಶ್ವರಿ ನಗರ 50, ನಾಯಂಡಹಳ್ಳಿ 45, ವಿದ್ಯಾಪೀಠ ಜಂಕ್ಷನ್ 45, ಹೊರಮಾವು 31, ಹೆರೋಹಳ್ಳಿ 29, ಪುಲಿಕೇಶಿನಗರ 27 ಎಂಎಂ ಮಳೆಯಾಗಿದೆ ಎಂದು ತಿಳಿದುಬಂದಿದೆ.

ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ

ಇನ್ನು ಸಂಜೆ ಹವಾಮಾನ ಇಲಾಖೆ ಮಳೆ ಕುರಿತು ಮುನ್ಸೂಚನೆ ನೀಡಿತ್ತು. ಬೆಂಗಳೂರಿನ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ 3 ದಿನ ಮಳೆ ಸಾಧ್ಯತೆ

ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಗರದಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮೇ 02 ರಿಂದ ಮೇ 04, ರವರೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಚರ್ಚೆಗೆ ಅಮಿತ್ ಶಾ ಉತ್ತರಿಸುತ್ತಾರೆ, ಆದರೆ...: ಕಿರಣ್ ರಿಜಿಜು

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?