ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿ ಎನ್ ಕೌಂಟರ್ ಗೆ ಬಲಿಯಾದ ವ್ಯಕ್ತಿ 
ರಾಜ್ಯ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಎನ್ ಕೌಂಟರ್ ಪ್ರಕರಣ: ರಾಜ್ಯ ಸರ್ಕಾರಕ್ಕೆ NHRC ನೋಟಿಸ್

ಆಯೋಗವು ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಂದ ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೇಳಿದೆ.

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ನಂತರ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC)ರಾಜ್ಯ ಸರ್ಕಾರ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ಮಾಧ್ಯಮಗಳ ಮಾಧ್ಯಮಗಳ ವರದಿ ಆಧಾರದ ಮೇಲೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ ಬುಧವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆಯೋಗವು ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಂದ ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೇಳಿದೆ.

ಸಂತ್ರಸ್ತೆ ಮತ್ತು ಆರೋಪಿಯ ಮರಣೋತ್ತರ ಪರೀಕ್ಷೆ ವರದಿ ಹಾಗೂ ಮ್ಯಾಜಿಸ್ಟೀರಿಯಲ್ ತನಿಖಾ ವರದಿ ಸೇರಿದಂತೆ ಒಟ್ಟಾರೇ ವರದಿಯನ್ನು ನಾಲ್ಕು ವಾರಗಳ ಒಳಗಾಗಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮಾಧ್ಯಮ ವರದಿಗಳು ನಿಜವಾಗಿದ್ದಲ್ಲಿ, ಸಂತ್ರಸ್ತೆ, ಅಪ್ರಾಪ್ತ ಬಾಲಕಿ ಮತ್ತು ಬಂಧಿತ ಶಂಕಿತ ಅಪರಾಧಿ, ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ವ್ಯಕ್ತಿಯ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯನ್ನು ಸೂಚಿಸುತ್ತವೆ ಎಂದು ಆಯೋಗ ಹೇಳಿದೆ.

ಏಪ್ರಿಲ್ 14 ರಂದು ಬಾಲಕಿಯ ಅಪಹರಣ ಮತ್ತು ಹತ್ಯೆ ನಡೆದಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದರು. ಬಳಿಕ ಆರೋಪಿ ಎನ್ ಕೌಂಟರ್ ನಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT