ಮೃತಪಟ್ಟ ಕಾರ್ತಿಕ್ 
ರಾಜ್ಯ

10 ಸಾವಿರ ರೂ ಹಣಕ್ಕಾಗಿ ಜೀವ ಕಳೆದುಕೊಂಡ 21 ವರ್ಷದ ಯುವಕ; ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದು ಸಾವು

ಕಾರ್ತಿಕ್ ಐದು ಬಾಟಲಿ ಮದ್ಯವನ್ನು ಸೇವಿದ್ದಾನೆ. ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಕೋಲಾರ ಜಿಲ್ಲೆಯ ಮುಳಬಾಗಿಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಆತ ಸಾವಿಗೀಡಾಗಿದ್ದಾನೆ.

ಬೆಂಗಳೂರು: ತನ್ನ ಸ್ನೇಹಿತರೊಂದಿಗೆ 10,000 ರೂ. ಬೆಟ್‌ ಕಟ್ಟಿ ಐದು ಬಾಟಲಿ ಕಚ್ಚಾ ಮದ್ಯ ಕುಡಿದು 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ.

ಮದ್ಯದೊಂದಿಗೆ ನೀರನ್ನು ಸೇರಿಸದೆಯೇ ಐದು ಬಾಟಲ್ ಕುಡಿಯುವುದಾಗಿ ಕಾರ್ತಿಕ್ ತನ್ನ ಸ್ನೇಹಿತರಾದ ವೆಂಕಟ ರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರಿಗೆ ಹೇಳಿದ್ದಾನೆ. ಒಂದು ವೇಳೆ ಕಾರ್ತಿಕ್‌ ನೀರನ್ನು ಮಿಶ್ರಣ ಮಾಡದೆಯೇ ಮದ್ಯ ಸೇವಿಸಿದರೆ 10,000 ರೂ. ನೀಡುವುದಾಗಿ ವೆಂಕಟ ರೆಡ್ಡಿ ಹೇಳಿದ್ದಾನೆ.

ಅದಾದ ಬಳಿಕ ಕಾರ್ತಿಕ್ ಐದು ಬಾಟಲಿ ಮದ್ಯವನ್ನು ಸೇವಿದ್ದಾನೆ. ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಕೋಲಾರ ಜಿಲ್ಲೆಯ ಮುಳಬಾಗಿಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಆತ ಸಾವಿಗೀಡಾಗಿದ್ದಾನೆ. ಕಾರ್ತಿಕ್ ಮದುವೆಯಾಗಿ ಒಂದು ವರ್ಷವಾಗಿತ್ತು ಮತ್ತು ಅವರ ಪತ್ನಿ ಎಂಟು ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು.

ವೆಂಕಟ ರೆಡ್ಡಿ ಮತ್ತು ಸುಬ್ರಮಣಿ ಸೇರಿದಂತೆ ಆರು ಜನರ ವಿರುದ್ಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರನ್ನೂ ಬಂಧಿಸಲಾಗಿದ್ದು, ಪೊಲೀಸರು ಇತರ ಆರೋಪಿಗಳಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಪ್ರತಿ ವರ್ಷ ಸುಮಾರು 2.6 ಮಿಲಿಯನ್ ಜನರು ಮದ್ಯ ಸೇವನೆಯಿಂದ ಸಾಯುತ್ತಾರೆ. ಇದು ಜಾಗತಿಕ ಸಾವುಗಳಲ್ಲಿ ಶೇ 4.7 ರಷ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT