ಹಾತಲಗೇರಿ ಗ್ರಾಮ Photo | Express
ರಾಜ್ಯ

ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿ: ಪ್ರಧಾನಿ ಮೋದಿಗೆ ಗದಗದ 'ಸೈನಿಕರ ಗ್ರಾಮ' ಮನವಿ

ಸೈನಿಕರ ಪೋಷಕರು ಮತ್ತು ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ಹೆಚ್ಚಿನ ಯುವಕರನ್ನು ಸಶಸ್ತ್ರ ಪಡೆಗಳಿಗೆ ಕಳುಹಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಗದಗ: ಪಾಕಿಸ್ತಾನಕ್ಕೆ ಪಾಠ ಕಲಿಸುವಂತೆ ಗದಗದಲ್ಲಿರುವ ಸೈನಿಕರ ಗ್ರಾಮ ಎಂದೂ ಕರೆಯಲ್ಪಡುವ ಹಾತಲಗೇರಿಯ ಜನರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ, ಈ ಸೈನಿಕರ ಪೋಷಕರು ಮತ್ತು ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ಹೆಚ್ಚಿನ ಯುವಕರನ್ನು ಸಶಸ್ತ್ರ ಪಡೆಗಳಿಗೆ ಕಳುಹಿಸಲು ಸಿದ್ಧರಿದ್ದೇವೆ ಎಂದು ಹೇಳುತ್ತಾರೆ. ಹಾತಲಗೇರಿಯ 200 ಕ್ಕೂ ಹೆಚ್ಚು ಯುವಕರು ಸಶಸ್ತ್ರ ಪಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಗ್ರಾಮದ ಹಿರಿಯರು ಭಾನುವಾರ ಸಭೆ ನಡೆಸಿ, ಪಾಕಿಸ್ತಾನದ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಲು ಮತ್ತು ದೇಶದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಪ್ರಧಾನಿ ತೆಗೆದುಕೊಳ್ಳುವ ಯಾವುದೇ ನಿರ್ಣಾಯಕ ಕ್ರಮವನ್ನು ನಾವು ಬೆಂಬಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಹಾತಲಗೇರಿ ಗದಗ ಪಟ್ಟಣದಿಂದ 8 ಕಿ.ಮೀ ದೂರದಲ್ಲಿದೆ ಮತ್ತು 4,000 ಜನಸಂಖ್ಯೆಯನ್ನು ಹೊಂದಿದೆ. ಗ್ರಾಮದ ಹೆಚ್ಚಿನ ಯುವಕರು ತಮ್ಮ ಪಿಯು ಅಥವಾ ಪದವಿ ಕೋರ್ಸ್‌ಗಳ ನಂತರ ಸಶಸ್ತ್ರ ಪಡೆಗಳಿಗೆ ಸೇರುತ್ತಾರೆ. ಅವರಿಗೆ, ಸಶಸ್ತ್ರ ಪಡೆಗಳಿಗೆ ಸೇರುವುದು ಒಂದು ಸಂಪ್ರದಾಯವಾಗಿದೆ.

ಹಾತಲಗೇರಿಯಲ್ಲಿ ಅನೇಕ ನಿವೃತ್ತ ಸೈನಿಕರಿದ್ದಾರೆ ಮತ್ತು ಗ್ರಾಮವು ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತದೆ. ವಿವಿಧ ಕಾರಣಗಳಿಂದ ಸಶಸ್ತ್ರ ಪಡೆಗಳಿಗೆ ಸೇರಲು ಸಾಧ್ಯವಾಗದ ಈ ಹಳ್ಳಿಯ ಅನೇಕರು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಬೆಂತೂರು, ಪೂಜಾರ್ ಮತ್ತು ಕರಿಯಂತಹ ಕುಟುಂಬಗಳು ತಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ಸಶಸ್ತ್ರ ಪಡೆಗಳಿಗೆ ಸೇರಿಸಿದ್ದಾರೆ. ಹಾತಲಗೇರಿಯ ಸೈನಿಕರ ಪೋಷಕರಾದ ಸತ್ಯಪ್ಪ ಪೂಜಾರ್ ಮತ್ತು ಮಾರುತಿ ಬೆಂತೂರು, ಮಾತನಾಡಿ, ನಮ್ಮ ಗಂಡು ಮಕ್ಕಳಿಗೆ ಅವಕಾಶ ಸಿಕ್ಕರೆ ಯಾವುದೇ ಭಯವಿಲ್ಲದೆ ದೇಶಕ್ಕಾಗಿ ಹೋರಾಡಲು ಹೇಳಿದ್ದೇವೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದಾಗಿ ದೇಶವು ಅನೇಕ ಸೈನಿಕರು ಮತ್ತು ನಾಗರಿಕರನ್ನು ಕಳೆದುಕೊಂಡಿದೆ. ಈಗ, ನಮ್ಮ ಪ್ರಧಾನಿ ಪಾಕಿಸ್ತಾನಕ್ಕೆ ಪಾಠ ಕಲಿಸಬೇಕೆಂದು ನಾವು ಬಯಸುತ್ತೇವೆ" ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT