ಡಿ.ಕೆ ಶಿವಕುಮಾರ್ 
ರಾಜ್ಯ

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿ.ಕೆ ಶಿವಕುಮಾರ್

ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ.

ಬೆಂಗಳೂರು: ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ IIFA ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ ಪ್ರಶಸ್ತಿ ವಿತರಣೆ ಸಮಾರಂಭ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಐಫಾದವರ ಜತೆ ಚರ್ಚೆ ನಡೆಸಲಾಯಿತು. ಒಂದಷ್ಟು ಕಾರ್ಯಕ್ರಮಗಳನ್ನು ಸಂಯೋಜಿಸಿ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಆಧ್ಯತೆ. ಜೊತೆಗೆ ಬೆಂಗಳೂರಿನ ಬಗ್ಗೆ ಮಹತ್ವ ನೀಡಬೇಕು ಎನ್ನುವುದು ನಮ್ಮ ಆಲೋಚನೆ ಎಂದರು.

ಈ ಹಿಂದೆ ರಾಜಸ್ಥಾನದಲ್ಲಿ ನಡೆದಿತ್ತು. ತೆಲಂಗಾಣದಲ್ಲಿ ಸೌಂದರ್ಯ ಸ್ಪರ್ಧೆ ಮಾಡುತ್ತಿದ್ದಾರೆ. ನಾವು ಇದನ್ನು ಮಾಡಲು ಹೋಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ. ಅಕ್ಟೋಬರ್ ನಲ್ಲಿ ದಸರಾವಿರುವ ಕಾರಣಕ್ಕೆ ಡಿಸೆಂಬರ್, ಜನವರಿಯಲ್ಲಿ ನಡೆಸಬಹುದು ಎಂದು ತಿಳಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ಸಿಗಲಿದೆ. ಮುಂಬೈ ಬಿಟ್ಟರೆ ಬೆಂಗಳೂರು ಈ ರೀತಿಯ ಕಾರ್ಯಕ್ರಮಗಳಿಗೆ ಸೂಕ್ತ ಎಂದು ಆಯೋಜಕರು ತಿಳಿಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ಬಂಡೀಪುರ, ನಾಗರಹೊಳೆ ಸಫಾರಿ ತಾತ್ಕಾಲಿಕ ಸ್ಥಗಿತ ಸಮರ್ಥಿಸಿಕೊಂಡ ಖಂಡ್ರೆ; ಷರತ್ತುಬದ್ಧ ಆರಂಭ

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

SCROLL FOR NEXT