ಸಿಸಿಟಿವಿ ದೃಶ್ಯ 
ರಾಜ್ಯ

ಸುದ್ದಗುಂಟೆಪಾಳ್ಯ ಯುವತಿಗೆ ಕಿರುಕುಳ ಪ್ರಕರಣ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ FIR ದಾಖಲು

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1 ನೇ ಕ್ರಾಸ್ ನಿವಾಸಿ ಲೋಕೇಶ್ ಗೌಡ (55) ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66e ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಏಪ್ರಿಲ್ 3 ರಂದು ಸುದ್ದಗುಂಟೆಪಾಳ್ಯದಲ್ಲಿ ಯುವತಿ ಮೇಲೆ ನಡೆದಿದ್ದ ಲೈಂಗಿಕ ಕಿರುಕುಳದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1 ನೇ ಕ್ರಾಸ್ ನಿವಾಸಿ ಲೋಕೇಶ್ ಗೌಡ (55) ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66e ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ,

ತಾವರೆಕೆರೆ ಮುಖ್ಯ ರಸ್ತೆಯಲ್ಲಿರುವ ಪಿಜಿ ವಸತಿಗೃಹದಲ್ಲಿ ವಾಸವಿರುವ ಮಹಿಳೆ ಲೋಕೇಶ್ ವಿರುದ್ಧ ಮಂಗಳವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯಕ್ತಿ ನನ್ನ ಒಪ್ಪಿಗೆಯಿಲ್ಲದೆ ತನ್ನ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಸ್ತುತ ಲೋಕೇಶ್ ನನ್ನೂ ಇನ್ನೂ ಬಂಧಿಸಲಾಗಿಲ್ಲ. ಅವರ ಸೆಕ್ಷನ್ 66ಇ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಸಕ್ಷನ್ ಅಡಿಯಲ್ಲಿ ಜಾಮೀನು ನೀಡಬಹುದಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏಪ್ರಿಲ್ 3 ರಂದು ಬೆಳಗಿನ ಜಾವ 1.52 ಕ್ಕೆ ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1 ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿತ್ತು. ಘಟನೆ ನಡೆದು ಹತ್ತು ದಿನಗಳ ನಂತರ, ಪೊಲೀಸರು ಕೇರಳದ ಕೋಝಿಕ್ಕೋಡ್ ಮೂಲದ 26 ವರ್ಷದ ಸಂತೋಷ್ ಡೇನಿಯಲ್ ಎಂಬಾತನನ್ನು ಬಂಧಿಸಿದ್ದರು.

ಕರ್ನಾಟಕ ಮತ್ತು ನೆರೆಯ ತಮಿಳುನಾಡು, ಕೇರಳದಾದ್ಯಂತ ಆರೋಪಿಯ ಚಲನವಲನಗಳನ್ನು ಪತ್ತೆಹಚ್ಚಿ, 700 ಕ್ಕೂ ಹೆಚ್ಚು ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT