ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ 
ರಾಜ್ಯ

ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ: ಶೀಘ್ರವೇ ಸರ್ವಪಕ್ಷ ಸಭೆ- ಸಿಎಂ ಸಿದ್ದರಾಮಯ್ಯ

ಸಭೆಯ ಪ್ರಮುಖ ಮುಖ್ಯಾಂಶಗಳು ಹೀಗಿವೆ. ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.

ಬೆಂಗಳೂರು: ಕೃಷ್ಣಾ ನ್ಯಾಯಾಧಿಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಇಂದು ಕಾವೇರಿ ನಿವಾಸದಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಸಭೆಯ ಪ್ರಮುಖ ಮುಖ್ಯಾಂಶಗಳು ಹೀಗಿವೆ. ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುವುದು. ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ.

ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ.

ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.

ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂ ಕೋರ್ಟ್‌ನಲ್ಲಿ ಎಸ್ಎಲ್‌ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿದೆ ಎನ್ನುವುದನ್ನು ಗಮನಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT