ಸೋನು ನಿಗಮ್ 
ರಾಜ್ಯ

ವಿವಾದಾತ್ಮಕ ಹೇಳಿಕೆ: ಕನ್ನಡಿಗರ ವ್ಯಾಪಕ ಆಕ್ರೋಶ; ಸಮರ್ಥನೆಯಲ್ಲೂ ಸೋನು ನಿಗಮ್ ಮೊಂಡುತನ! Video

ಕನ್ನಡ, ಕನ್ನಡ ಎಂದು ಖುಷಿಯಲ್ಲಿ ಹೇಳುವುದಕ್ಕೂ, ಕೋಪದಿಂದ ಬೆದರಿಕೆಯೊಡ್ಡುವ ರೀತಿ ಹೇಳುವುದಕ್ಕೂ ವ್ಯತ್ಯಾಸ ಇದೆ.

ಬೆಂಗಳೂರು: ಕನ್ನಡ ಹಾಡು ಹೇಳುವಂತೆ ಕೇಳಿದ್ದಕ್ಕೆ ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ಎಂದು ಹೇಳಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಬಾಲಿವುಡ್ ಗಾಯಕ ಸೋನು ನಿಗಮ್ ಇದೀಗ ತಮ್ಮನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೆ ಸಮರ್ಥನೆಯ ದಾಟಿಯೂ ಅದೇ ಮೊಂಡುತನದಿಂದ ಕೂಡಿದ್ದು, ಕನ್ನಡಿಗರು ಮತ್ತೆ ಕಿಡಿಕಾರಿದ್ದಾರೆ.

ಹೌದು. ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಸೋನು ನಿಗಮ್, ಕನ್ನಡ, ಕನ್ನಡ ಎಂದು ಖುಷಿಯಲ್ಲಿ ಹೇಳುವುದಕ್ಕೂ, ಕೋಪದಿಂದ ಬೆದರಿಕೆಯೊಡ್ಡುವ ರೀತಿ ಹೇಳುವುದಕ್ಕೂ ವ್ಯತ್ಯಾಸ ಇದೆ. ನಾನು ಶೋ ನೀಡುವಾಗ ನಾಲ್ಕೈದು ಗೂಂಡಾಗಳ ರೀತಿಯಲ್ಲಿ ಇದ್ದರು. ಆ ನಾಲ್ಕೈದು ಜನರಿಗೆ ತಿಳುವಳಿಕೆ ಹೇಳುವುದು ಅಗತ್ಯವಿತ್ತು ಎಂದು ಹೇಳಿದ್ದಾರೆ.

ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ಪ್ಯಾಂಟ್​ ತೆಗೆಸಿದರೆ ಹೊರತು, ಯಾವ ಭಾಷೆ ಎಂದು ಯಾರು ಕೂಡ ಕೇಳಲಿಲ್ಲ ಎನ್ನುವ ದಾಟಿಯಲ್ಲಿ ನಾನು ಹೇಳಿದ್ದೇನೆ. ಕನ್ನಡ ಭಾಷೆಯ ಬಗ್ಗೆ ಅಪಾರ ಗೌರವವಿದ್ದು, ನಾನು ಅಪಮಾನ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ನಾನು ಯಾವಾಗಲೂ ಕನ್ನಡ ಹಾಡನ್ನು ಹಾಡಲು ಎಲ್ಲ ರೀತಿಯಿಂದಲೂ ಸಿದ್ಧನಾಗಿ ಬಂದಿರುತ್ತೇನೆ. ಇದನ್ನು ಈಗಾಗಲೇ ಅನೇಕ ಬಾರಿ ಹೇಳಿದ್ದೇನೆ. ಆದರೆ, ಈ ರೀತಿ ತೊಂದರೆ ಕೊಡುವವರು ಯಾರೇ ಆದರೂ ಅವರನ್ನು ಅಲ್ಲಿಯೇ ತಡೆಯಬೇಕು ಎಂದಿದ್ದಾರೆ.

ಅಂದು ಆಗಿದ್ದೇನು? ಈಸ್ಟ್ ಪಾಯಿಂಟ್ ಕಾಲೇಜು ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದು, ಅದು ಸಾಮಾನ್ಯ ಕೂಡ ಆಗಿತ್ತು. ಆದರೆ, ಈ ವೇಳೆ ತಾಳ್ಮೆ ಕಳೆದುಕೊಂಡ ಸೋನು ನಿಗಮ್ ಅವರು, ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿದ್ದಾರೆ.

ಈ ಹೇಳಿಕೆ ಇದೀಗ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಸೋನು ನಿಗಮ್ ಅವರ ಕುರಿತು ತೀವ್ರ ಟೀಕೆ ವ್ಯಕ್ತವಾಗುತ್ತಿರುವುದಲ್ಲದೇ, ಬ್ಯಾನ್ ಮಾಡಬೇಕೆಂಬ ಆಗ್ರಹಗಳೂ ಕೇಳಿ ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT