ಹೆಚ್ ಡಿ ದೇವೇಗೌಡ 
ರಾಜ್ಯ

ಉಗ್ರರನ್ನು ಸದೆಬಡಿಯಲು ಪ್ರಧಾನಿ ಮೋದಿಗೆ ಜೆಡಿಎಸ್ ಬೆಂಬಲ: ಹೆಚ್.ಡಿ ದೇವೇಗೌಡ

ಹಾಸನ ತಾಲೂಕು ದ್ಯಾಪಲಾಪುರದಲ್ಲಿ ದೇಗುಲ ಉದ್ಘಾಟಿಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಉಗ್ರರ ವಿರುದ್ಧ ಪ್ರಧಾನಿ ದೃಢ ನಿರ್ಧಾರ ಕೈಗೊಂಡಿದ್ದಾರೆ

ಹಾಸನ: ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಸೋಮವಾರ ಹೇಳಿದ್ದಾರೆ.

ಹಾಸನ ತಾಲೂಕು ದ್ಯಾಪಲಾಪುರದಲ್ಲಿ ದೇಗುಲ ಉದ್ಘಾಟಿಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಉಗ್ರರ ವಿರುದ್ಧ ಪ್ರಧಾನಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಕಾಶ್ಮೀರದಲ್ಲಿ ಉಪಟಳ ನೀಡುತ್ತಿರುವ ಉಗ್ರರು ಎಲ್ಲೇ ಅಡಗಿದ್ದರೂ ಹೊರಗೆಳೆದು ಶಿಕ್ಷಿಸುವರೆಗೂ ಬಿಡುವುದಿಲ್ಲ ಎಂದು ಪ್ರಧಾನಿ ಘೋಷಿಸಿದ್ದಾರೆ.

ಯಾವುದೇ ಕ್ರಮ ಕೈಗೊಳ್ಳಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಉಗ್ರರನ್ನು ಸದೆಬಡಿಯಲು ಪ್ರಧಾನಿಗೆ ನಮ್ಮ ಬೆಂಬಲವಿದೆ ಎಂದರು.

ಪಾಕಿಸ್ತಾನದಿಂದ ಆಮದಾಗುವ ಮತ್ತು ಪಾಕಿಸ್ತಾನಕ್ಕೆ ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ನಿರ್ಬಂಧ ಹೇರುವ ಕಠಿಣ ಕ್ರಮ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. 26 ಪ್ರವಾಸಿಗರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ನಂತರ ಸಿಂಧೂ ನದಿ ನೀರು ಒಪ್ಪಂದ ರದ್ದತಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹಲವಾರು ಕ್ರಮಗಳನ್ನು ಭಾರತ ತೆಗೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT