ಪ್ರಾತಿನಿಧಿಕ ಚಿತ್ರ 
ರಾಜ್ಯ

ತುಮಕೂರು: ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 5 ವರ್ಷದ ಬಾಲಕ ಸಾವು

ಮೃತನನ್ನು ತುರುವೇಕೆರೆ ಪಟ್ಟಣದ ಬಳಿಯ ಗೊರಘಟ್ಟ ಗ್ರಾಮದ ನಿವಾಸಿ ಚಂದ್ರಯ್ಯ ಅವರ ಮಗ ಪೋಷಕ ಶೆಟ್ಟಿ ಎಂದು ಗುರುತಿಸಲಾಗಿದೆ.

ತುಮಕೂರು: ಮನೆಯ ಹೊರಗೆ ಆಟವಾಡುತ್ತಿದ್ದ ಐದು ವರ್ಷದ ಬಾಲಕ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ದುರಂತ ಘಟನೆ ಮಂಗಳವಾರ ತುಮಕೂರಿನಲ್ಲಿ ನಡೆದಿದೆ.

ಮೃತನನ್ನು ತುರುವೇಕೆರೆ ಪಟ್ಟಣದ ಬಳಿಯ ಗೊರಘಟ್ಟ ಗ್ರಾಮದ ನಿವಾಸಿ ಚಂದ್ರಯ್ಯ ಅವರ ಮಗ ಪೋಷಕ ಶೆಟ್ಟಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ವಿದ್ಯುತ್ ತಂತಿ ತುಂಡಾಗಿ ಮನೆಯ ಮುಂಭಾಗದ ಬೇಲಿಯ ಮೇಲೆ ಬಿದ್ದಿದೆ. ಇದನ್ನು ಗಮನಿಸದ ಪೋಷಕ ಬೆಳಿಗ್ಗೆ ಆಟವಾಡುತ್ತಿದ್ದಾಗ, ಆಕಸ್ಮಿಕವಾಗಿ ಬೇಲಿಗೆ ತಾಗಿ ವಿದ್ಯುತ್ ಸ್ಪರ್ಶವಾಗಿದೆ. ಗಾಯಗಳಿಂದ ಪೋಷಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬಾಲಕನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ದಂಡಿನಶಿವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT