ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 
ರಾಜ್ಯ

Operation Sindoor: ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಆದೇಶ

ರಾಜ್ಯ ಸರ್ಕಾರ ಸಹ ಭಾರತೀಯ ಸೇನೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು: ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಗೆ ದೇಶದಾದ್ಯಂತ ಅಭಿನಂದಿಸಲಾಗುತ್ತಿದೆ. ರಾಜ್ಯ ಸರ್ಕಾರ ಸಹ ಭಾರತೀಯ ಸೇನೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರ್ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಹೀಗಾಗಿ ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್​ ಲಾಲ್​ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.

ಸರ್ಕಾರಿ ಆದೇಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಬಂಟ್ವಾಳದಲ್ಲಿ ಕಸ ಗುಡಿಸಲು ಫಾರ್ಚೂನರ್‌ ಕಾರಲ್ಲಿ ಬರುತ್ತಾನೆ ಪೌರಕಾರ್ಮಿಕ: ಸೈಕಲ್​ನಿಂದ ಐಷರಾಮಿ ಕಾರಿನವರೆಗೆ 'ಸೇಸಪ್ಪ'ರ ಯಶೋಗಾಥೆ!

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಸಕ್ರಿಯ ರಾಜಕೀಯಕ್ಕೆ ಬರುವ ಬಯಕೆ ಬಿಚ್ಚಿಟ್ಟ ಸೈನಾ ನೆಹ್ವಾಲ್; BJPಯಿಂದ ಚುನಾವಣಾ ಅಖಾಡಕ್ಕೆ ಎಂಟ್ರಿ?