ಏರ್ ಇಂಡಿಯಾ 
ರಾಜ್ಯ

'Operation Sindoor': ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್ ಇಂಡಿಯಾ!

ಇಂದು ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಭದ್ರತಾ ಸಂಬಂಧಿತ ಕಾರಣಗಳಿಂದಾಗಿ ಗುರುತು ಬಹಿರಂಗಪಡಿಸದ ಪ್ರಯಾಣಿಕನನ್ನು ಆಫ್‌ಲೋಡ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ದೇಶಾದ್ಯಂತ ಬಿಗಿ ಭದ್ರತೆಯ ನಡುವೆ, ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಏರ್ ಇಂಡಿಯಾ ವಿಮಾನದಿಂದ ಒಬ್ಬ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಪ್ರಯಾಣಿಕನು ಬೆಂಗಳೂರಿನಿಂದ ನವದೆಹಲಿಗೆ AI-2820 ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು

ಇಂದು ಸಂಜೆ 6.05 ಕ್ಕೆ ವಿಮಾನ ಹೊರಡುವ ಮೊದಲು, ಭದ್ರತಾ ಸಂಬಂಧಿತ ಕಾರಣಗಳಿಂದಾಗಿ ಗುರುತು ಬಹಿರಂಗಪಡಿಸದ ಪ್ರಯಾಣಿಕನನ್ನು ಆಫ್‌ಲೋಡ್ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

ಈ ಘಟನೆಯನ್ನು ಖಚಿತಪಡಿಸಿದ ಏರ್ ಇಂಡಿಯಾ ಅಧಿಕಾರಿಯೊಬ್ಬರು, "ನಮಗೆ ಘಟನೆಯ ಬಗ್ಗೆ ಮಾಹಿತಿ ಇದೆ. ಆದರೆ ಯಾವುದೇ ವಿವರಗಳನ್ನು ಹಂಚಿಕೊಳ್ಳುವುದಿಲ್ಲ." "ಪ್ರಯಾಣಿಕನನ್ನು ಕೆಳಗಿಳಿಸಲು ಒಂದು ಕಾರಣವಿರುತ್ತದೆ ಮತ್ತು ಇದು ನಿಯಮಿತವಾಗಿ ಮಾಡುವ ಕೆಲಸವಲ್ಲ. ನಿರ್ದಿಷ್ಟ ಕಾರಣಗಳಿದ್ದವು, ಅದನ್ನು ನಾವು ಬಹಿರಂಗಪಡಿಸುವ ಸ್ಥಿತಿಯಲ್ಲಿಲ್ಲ" ಎಂದು ತಿಳಿಸಿದ್ದಾರೆ.

ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಇಂದು ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. 'ಆಪರೇಷನ್ ಸಿಂಧೂರ್' ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT