ಸಿದ್ದರಾಮಯ್ಯ 
ರಾಜ್ಯ

ಭಾರತ-ಪಾಕ್ ಉದ್ವಿಗ್ನತೆ: ರಾಜ್ಯ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ; ಸಿಎಂ ಸಿದ್ದರಾಮಯ್ಯ

ಭದ್ರತಾ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಮಂಡ್ಯ: ಆಪರೇಷನ್ ಸಿಂಧೂರ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ತಮ್ಮ ಸರ್ಕಾರ ರಾಜ್ಯದಾದ್ಯಂತ ಎಚ್ಚರಿಕೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.

ಭದ್ರತಾ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯದ ಅಣೆಕಟ್ಟುಗಳು ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, 'ನಾವು ಎಲ್ಲೆಡೆ ಎಚ್ಚರಿಕೆ ನೀಡಿದ್ದೇವೆ. ಏಕೆಂದರೆ, ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ' ಎಂದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸ್ಥಳಗಳಲ್ಲಿ ಮಾಕ್ ಡ್ರಿಲ್‌ಗಳನ್ನು ನಡೆಸಲಾಗುತ್ತಿದೆ ಮತ್ತು ಕೇಂದ್ರವು ನೀಡಿದ ಸೂಚನೆಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇನ್ನೂ ಇರುವ ಕೆಲವು ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, 'ಬಹುತೇಕ ಎಲ್ಲರೂ ಹೋಗಿದ್ದಾರೆ. ಮೈಸೂರಿನ ಒಂದು ಕುಟುಂಬ ನ್ಯಾಯಾಲಯದ ಮೊರೆ ಹೋಗಿದೆ. ಅಂತಹ ಪ್ರಕರಣಗಳು ಮಾತ್ರ ಇನ್ನೂ ಇರಬಹುದು. ಇನ್ನುಳಿದ ಎಲ್ಲರೂ ಹೋಗಿದ್ದಾರೆ. ರಾಜ್ಯದಲ್ಲಿ ಇನ್ನೂ ಎಷ್ಟು ಪಾಕಿಸ್ತಾನಿಗಳಿದ್ದಾರೆ ಎಂಬುದರ ಬಗ್ಗೆ ನನಗೆ ನಿಖರವಾದ ಮಾಹಿತಿ ಇಲ್ಲ' ಎಂದು ಹೇಳಿದರು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲ ದೇವಾಲಯಗಳಲ್ಲಿ ಸಶಸ್ತ್ರ ಪಡೆಗಳ ಯೋಗಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆಗಳನ್ನು ನಡೆಸುವಂತೆ ರಾಮಲಿಂಗಾರೆಡ್ಡಿ ಸೂಚನೆಗಳನ್ನು ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT