ಜನಾರ್ದನ ರೆಡ್ಡಿ online desk
ರಾಜ್ಯ

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಸಿಬಿಐ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ಜನಪರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT