ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾ, ಬೆಂಗಳೂರು 
ರಾಜ್ಯ

ಭಾರತ-ಪಾಕ್ ಉದ್ವಿಗ್ನತೆ: ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಪ್ರಯಾಣಿಕರಿಗೆ ಸಲಹೆ

ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ, ವಿಮಾನ ಹೊರಡುವ ಸಮಯಕ್ಕಿಂತ ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಶುಕ್ರವಾರ ಪ್ರಯಾಣಿಕರಿಗೆ ಮನವಿ ಮಾಡಿದೆ.

ಭದ್ರತೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಲಹೆ ಮಾರ್ಗಸೂಚಿಯಲ್ಲಿ ಹೊಸ ಅಂಶವನ್ನು ಸೇರ್ಪಡೆ ಮಾಡಲಾಗಿದ್ದು, ತಪಾಸಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ಪ್ರಯಾಣಿಕರು ವಿಮಾನ ಹೊರಡುವ ಮೂರು ಗಂಟೆಗೂ ಮುನ್ನವೇ ವಿಮಾನ ನಿಲ್ದಾಣಕ್ಕೆ ತಲುಪುವಂತೆ ಸೂಚಿಸಲಾಗಿದೆ.

ದೇಶದಾದ್ಯಂತ ಹೆಚ್ಚಿದ ಭದ್ರತಾ ದೃಷ್ಟಿಯಿಂದಾಗಿ ಎಲ್ಲ ವಿಮಾನ ನಿಲ್ದಾಣಗಳಲ್ಲಿ ವರ್ಧಿತ ಸ್ಕ್ರೀನಿಂಗ್ ಕ್ರಮಗಳು ಜಾರಿಯಲ್ಲಿವೆ. ಸುಗಮ ಚೆಕ್-ಇನ್, ಭದ್ರತೆ ಮತ್ತು ಬೋರ್ಡಿಂಗ್‌ಗಾಗಿ ಪ್ರಯಾಣಿಕರು ವಿಮಾನ ನಿರ್ಗಮಿಸುವ ಕನಿಷ್ಠ ಮೂರು ಗಂಟೆಗೂ ಮುನ್ನವೇ ನಿಲ್ದಾಣಕ್ಕೆ ಆಗಮಿಸಲು ಸೂಚಿಸಲಾಗಿದೆ' ಎಂದು ತಿಳಿಸಿದೆ.

ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಎಲ್ಲ ವಿಮಾನಗಳಿಗೆ ದ್ವಿತೀಯ ಹಂತದ ಭದ್ರತಾ (ಸೆಕೆಂಡರಿ ಲ್ಯಾಡರ್ ಪಾಯಿಂಟ್) ತಪಾಸಣೆಯನ್ನು ಕಡ್ಡಾಯಗೊಳಿಸಿದೆ. ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡಗಳಲ್ಲಿ ಸಂದರ್ಶಕರಿಗೆ ನಿಷೇಧ ಹೇರಲಾಗಿದೆ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ