ಸಂಗ್ರಹ ಚಿತ್ರ 
ರಾಜ್ಯ

ಮೇ 28ರಂದು ಕರ್ನಾಟಕಕ್ಕೆ ಮುಂಗಾರು ಆಗಮನ: ಈ ಬಾರಿ ದಾಖಲೆ ಮಳೆ ಸಾಧ್ಯತೆ..!

ಪ್ರತಿ ಬಾರಿ ಜೂನ್ 1ಕ್ಕೆ ಮಾನ್ಸೂನ್ ಮಾರುತ ಆರಂಭವಾಗುವ ವಾಡಿಕೆ ಇತ್ತು. ಆದರೆ, ಈ ವರ್ಷ ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ.

ಬೆಂಗಳೂರು: ಈ ಬಾರಿ ಬೇಸಿಗೆ ಕಾಲ ಬೇಗನೆ ಮುಗಿಯುತ್ತಿದ್ದು, 5 ದಿನ ಮುಂಚಿತವಾಗಿಯೇ ರಾಜ್ಯದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆಗಳಿವೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿ ಬಾರಿ ಜೂನ್ 1ಕ್ಕೆ ಮಾನ್ಸೂನ್ ಮಾರುತ ಆರಂಭವಾಗುವ ವಾಡಿಕೆ ಇತ್ತು. ಆದರೆ, ಈ ವರ್ಷ ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ. ಜೂನ್ 1 ರಂದು ನೈಋತ್ಯ ಮಾರುತ ಕೇರಳವನ್ನು ಪ್ರವೇಶಿಸಿದರೆ, ಜೂನ್ 8ರೊಳಗೆ ಇಡೀ ದೇಶವನ್ನ ಆವರಿಸುತ್ತಿತ್ತು. ಆದರೆ, ಈ ಬಾರಿ 5 ದಿನ ಮುಂಚಿತವಾಗಿ ಮುಂಗಾರು ಮಳೆ ಆರಂಭವಾಗುತ್ತಿದೆ.

ಮುಂಗಾರು 5 ದಿನದ ಮುಂಚಿತವಾಗಿ ಬರುತ್ತಿರುವುದು ಕಳೆದ 16 ವರ್ಷದ ಬಳಿಕ ಇದೇ ಮೊದಲಾಗಿದೆ. 2009ರಲ್ಲಿ ಮೇ.23 ರಂದು ಇದೇ ರೀತಿಯಲ್ಲಿ ಮುಂಗಾರು 5 ದಿನಗಳ ಮುಂಚೆ ಆರಂಭವಾಗಿತ್ತು. ಈ ಬಾರಿ ಮೇ 27ರಂದು ಆರಂಭವಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೇ.28ರಂದು ಕರ್ನಾಟಕದಲ್ಲಿ ಮುಂಗಾರು ಆಗಮನವಾಗಲಿದ್ದು, ಈ ವರ್ಷ ಸಾಮಾನ್ಯಕ್ಕಿತ ಹೆಚ್ಚಿನ ಮಳೆಯಾಗುವ ನಿರೀಕ್ಷೆಗಳಿವೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ಆದರೆ ,ರಾಜ್ಯದ ಇತರ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು ಹೇಳಿದ್ದಾರೆ.

ಜೂನ್ ಮತ್ತು ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದ ನಡುವೆ ಸರಾಸರಿ ಮಳೆ 860 ಮಿ.ಮೀ. ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಸಾಮಾನ್ಯಕ್ಕಿಂತ ಸುಮಾರು ಶೇ.5 ಹೆಚ್ಚು ಮಳೆಯಾಗಲಿದೆ. ಸರಾಸರಿ 900 ಮಿ.ಮೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂದಿನ ವಾರ ರಾಜ್ಯಾದ್ಯಂತ ಸಾಮಾನ್ಯ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT