ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವೈದ್ಯರ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಓರ್ವನಿಗೆ ಗಾಯ

ಬಾಪೂಜಿ ಲೇಔಟ್‌ನ 4 ನೇ ಕ್ರಾಸ್‌ನಲ್ಲಿರುವ ಡಾ. ಬಿ.ಎಸ್. ಗಂಗಾಧರ್ (67) ಅವರ ಮನೆಗೆ ನಾಲ್ವರು ದುಷ್ಕರ್ಮಿಗಳಿದ್ದ ಗುಂಪೊಂದು ಶನಿವಾರ ಬೆಳಗಿನ ಜಾವ 12.20 ರಿಂದ 12.25 ರ ನಡುವೆ ಬೆಂಕಿ ಹಚ್ಚಿದೆ.

ಬೆಂಗಳೂರು: ದುಷ್ಕರ್ಮಿಗಳ ಗುಂಪೊಂದು ವೈದ್ಯರ ಮನೆಗೆ ಬೆಂಕಿ ಹಚ್ಚಲು ಯತ್ನಿಸಿದ್ದು, ಪರಿಣಾಮ ಮನೆಯ ಸೆಕ್ಯೂರಿಟಿ ಗಾರ್ಡ್ ಗಾಯಗೊಂಡು, 45 ಲಕ್ಷ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಬಾಪೂಜಿ ಲೇಔಟ್‌ನಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ಬಾಪೂಜಿ ಲೇಔಟ್‌ನ 4 ನೇ ಕ್ರಾಸ್‌ನಲ್ಲಿರುವ ಡಾ. ಬಿ.ಎಸ್. ಗಂಗಾಧರ್ (67) ಅವರ ಮನೆಗೆ ನಾಲ್ವರು ದುಷ್ಕರ್ಮಿಗಳಿದ್ದ ಗುಂಪೊಂದು ಶನಿವಾರ ಬೆಳಗಿನ ಜಾವ 12.20 ರಿಂದ 12.25 ರ ನಡುವೆ ಬೆಂಕಿ ಹಚ್ಚಿದ್ದಾರೆ. ಘಟನೆ ವೇಳೆ ಕರ್ತವ್ಯದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ತ್ಯಾಗರಾಜ್ ಅವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಘಟನೆ ಸಂಬಂಧ ವೈದ್ಯ ಗಂಗಾಧರ್ (44) ಅವರು ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ, ಕಳೆದ ಎಂಟು ವರ್ಷಗಳಿಂದ ತಮ್ಮ ಕುಟುಂಬದೊಂದಿಗೆ ಆ ಮನೆಯಲ್ಲಿ ವಾಸಿಸುತ್ತಿದ್ದು, ಬೆಂಕಿ ಅವಘಡದಲ್ಲಿ 45 ಲಕ್ಷ ರೂಪಾಯಿ ಮೌಲ್ಯದಷ್ಟು ನಷ್ಟವಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಜುಲೈ 30 ರಂದು, ವಿಜಯನಗರದ ಎಂಆರ್‌ಬಿಹೆಚ್ ಕಾಲೋನಿಯಲ್ಲಿರುವ ನನ್ನ ಪುತ್ರ ಡಾ. ತುಷಾರ್'ಗೆ ಸೇರಿದ ಫಾರ್ಮಾ ಕಂಪನಿಯಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು. ಇಬ್ಬರು ದುಷ್ಕರ್ಮಿಗಳು ಕಂಪನಿಯ ಬಾಗಿಲುಗಳಿಗೆ ಬೆಂಕಿ ಹಚ್ಚಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಬ್ಬರು ವ್ಯಕ್ತಿಗಳು ಕಂಪನಿಯ ಸಿಸಿಟಿವಿ ಕ್ಯಾಮೆರಾಗಳನ್ನು ಕದ್ದಿದ್ದರು ಎಂದು ಹೇಳಿದ್ದಾರೆ.

ಘಟನೆ ಸಂಬಂಧ ತುಷಾರ್ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎರಡೂ ಪ್ರಕರಣಗಳು ತನಿಖೆಯಲ್ಲಿವೆ. ಎಲ್ಲಾ ಪ್ರಕರಣಗಳು ಒಂದೇ ರೀತಿಯ ಮಾದರಿಯನ್ನು ಹೊಂದಿರುವುದರಿಂದ, ದೂರುದಾರರಿಗೆ ತಿಳಿದಿರುವ ಯಾರಾದರೂ ಈ ಘಟನೆಗಳ ಹಿಂದೆ ಇರಬೇಕೆಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಂಗಾಧರ್ ಅವರ ದೂರಿನ ಆಧಾರದ ಮೇಲೆ, ಚಂದ್ರ ಲೇಔಟ್ ಪೊಲೀಸರು ಕೊಲೆ ಯತ್ನ (ಬಿಎನ್‌ಎಸ್ 109), ದುಷ್ಕೃತ್ಯ (ಬಿಎನ್‌ಎಸ್ 326 (ಜಿ)) ಮತ್ತು ಬಿಎನ್‌ಎಸ್‌ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT