ತುಂಗಾ ಭದ್ರಾ ಜಲಾಶಯ 
ರಾಜ್ಯ

ನೀರಾವರಿ ಯೋಜನೆಗಳಿಗೆ ಸಿಗದ ಅನುದಾನ: ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಅಸಮಾಧಾನ

ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಘೋಷಿತ ಅನುದಾನ ಬಿಡುಗಡೆ ಆಗುತ್ತಿಲ್ಲ. ಹೀಗಾಗಿ, ರಾಜ್ಯದ ನೀರಾವರಿ ಯೋಜನೆಗಳು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿವೆ.

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.

2024–25 ಮತ್ತು 2025–26 ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ರಾಜ್ಯ ನೀತಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌.ಪಾಟೀಲ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಜಲಸಂಪನ್ಮೂಲ, ಆರ್‌ಡಿಪಿಆರ್, ಪಿಡಬ್ಲ್ಯೂಡಿ, ವಾಣಿಜ್ಯ ಮತ್ತು ಕೈಗಾರಿಕೆಗಳು, ನಗರಾಭಿವೃದ್ಧಿ ಮತ್ತು ಸಣ್ಣ ನೀರಾವರಿ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಅನುದಾನ ಹಂಚಿಕೆ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು.

ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ ಗುಪ್ತ ಮಾತನಾಡಿ, ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಘೋಷಿತ ಅನುದಾನ ಬಿಡುಗಡೆ ಆಗುತ್ತಿಲ್ಲ. ಹೀಗಾಗಿ, ರಾಜ್ಯದ ನೀರಾವರಿ ಯೋಜನೆಗಳು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿವೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದರೂ ಯೋಜನೆಗೆ ಅಗತ್ಯವಿರುವ ರೂ.5,600 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ಈವರೆಗೆ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

ಕೃಷ್ಣಾ ಮತ್ತು ತುಂಗಭದ್ರಾ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನೆರೆಯ ತೆಲಂಗಾಣ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಆದರೆ, ಆಂಧ್ರಪ್ರದೇಶ ಸರ್ಕಾರ ನಕರಾತ್ಮಕ ಧೋರಣೆ ತಾಳಿದೆ. ಹೀಗಾಗಿ ನೀರಾವರಿ ಯೋಜನೆ ವಿಳಂಬವಾಗಿದೆ. ಕೇಂದ್ರ ಜಲಸಂಪನ್ಮೂಲ ಸಚಿವರು ಸಭೆ ಕರೆದರೂ ಆಂಧ್ರಪ್ರದೇಶದಿಂದ ಯಾರೂ ಭಾಗವಹಿಸುತ್ತಿಲ್ಲ. ತಮಿಳುನಾಡು ಕೂಡಾ ಕರ್ನಾಟಕದ ಯೋಜನೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಿ, ಆಂಧ್ರ ಮತ್ತು ತಮಿಳುನಾಡು ಸರ್ಕಾರಗಳು ರಾಜ್ಯದ ಯೋಜನೆಗಳಿಗೆ ಒಪ್ಪಿಗೆ ಸೂಚಿಸುವಂತೆ ಮಾಡಬೇಕು ಎಂದು ತಿಳಿಸಿದರು.

ರಾಜ್ಯದ ರೈಲ್ವೆ ಯೋಜನೆಗಳಿಗೆ ಹಣಕಾಸಿನ ಕೊರತೆ ಆಗುತ್ತಿಲ್ಲ. ಕೇಂದ್ರ ಭೂಸಾರಿಗೆ ಮತ್ತು ರಸ್ತೆ ಅಭಿವೃದ್ಧಿ ಇಲಾಖೆಯೂ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸಲು ಅಗತ್ಯವಿರುವಷ್ಟು ಹಣ ಬಿಡುಗಡೆ ಮಾಡುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ