ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜ್ಯ

3 ತಿಂಗಳಲ್ಲಿ ಗುತ್ತಿಗೆದಾರರ 32,000 ಕೋಟಿ ರೂ ಬಾಕಿ ಬಿಲ್ ಪಾವತಿ: DCM ಡಿ.ಕೆ ಶಿವಕುಮಾರ್ ಭರವಸೆ

ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಡಿಸಿಎಂಗೆ ವಿವರಿಸಿದ್ದೇವೆ. ಸಣ್ಣ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ.

ಬೆಂಗಳೂರು: ಸರ್ಕಾರದಿಂದ ಗುತ್ತಿಗೆದಾರರಿಗೆ ಬಾಕಿ ಇರುವ, 32,000 ಕೋಟಿ ರೂಪಾಯಿಯನ್ನು ಮುಂದಿನ ಎರಡು-ಮೂರು ತಿಂಗಳಲ್ಲಿ ಪಾವತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಭರವಸೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (KSCA) ಜೊತೆ ಮಂಗಳವಾರ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಮಂಜುನಾಥ್, ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಡಿಸಿಎಂಗೆ ವಿವರಿಸಿದ್ದೇವೆ. ಸಣ್ಣ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಸಣ್ಣ ಗುತ್ತಿಗೆದಾರರಲ್ಲಿ ಹಿರಿತನದ ಆಧಾರದ ಮೇಲೆ ಬಾಕಿ ಪಾವತಿಸುವುದಾಗಿ ಡಿಸಿಎಂ ಭರವಸೆ ನೀಡಿದ್ದಾರೆ. ಬಿಲ್‌ಗಳನ್ನು ತೆರವುಗೊಳಿಸುವಾಗ ಅಧಿಕಾರಿಗಳು ಮಾಡುವ ತಪ್ಪುಗಳು ಸಿಎಂ ಅಥವಾ ಸಚಿವರಿಗೆ ತಿಳಿದಿಲ್ಲ. ನಾವು ಇದನ್ನು ಉಪಮುಖ್ಯಮಂತ್ರಿಗಳಿಗೆ ವಿವರಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವುದಾಗಿ ಶಿವಕುಮಾರ್ ಅವರು ಭರವಸೆ ನೀಡಿದ್ದಾರೆಂದು ತಿಳಿಸಿದರು.

ಈ ಸಭೆ ಫಲಪ್ರದವಾಗಿದೆ. ಯಾವುದೇ ಸಮಸ್ಯೆ ಇದ್ದರೆ ತಮ್ಮನ್ನು ಸಂಪರ್ಕಿಸುವಂತೆ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಅಧಿಕಾರಿಗಳು ಮಾಡಿದ ತಪ್ಪುಗಳು ಶಿವಕುಮಾರ್ ಅವರಿಗೆ ತಿಳಿದಿದೆ. ಇದನ್ನು ಸರಿಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಸಣ್ಣ ಗುತ್ತಿಗೆದಾರರಿಗೆ ಪರಿಹಾರ ಸಿಗಬೇಕೆಂದು ನಾವು ಬಯಸುತ್ತೇವೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT