ಸಂಗ್ರಹ ಚಿತ್ರ 
ರಾಜ್ಯ

ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕ: ಬುದ್ಧಿ ಹೇಳಿದ್ದಕ್ಕೆ ಹತ್ಯೆಗೆ ಯತ್ನ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

ವೇಳೆ ಆರೋಪಿಗಳು ಏಕಮುಖವಾಗಿ ಆಟೋ ಚಲಾಯಿಸಿಕೊಂಡು ಬಂದು ಪ್ರಿಯದರ್ಶಿನಿ ಲೇಔಟ್‌ನ ಜಸ್ಟ್ ಬೇಕ್ ಬಳಿ ಡಿಕ್ಕಿ ಹೊಡೆದಿದ್ದಾರೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದುರ್ವರ್ತನೆ ತೋರಿದ ಆಟೋ ಚಾಲಕನಿಗೆ ಬುದ್ಧಿ ಹೇಳಿದ್ದಕ್ಕೆ, ಇಬ್ಬರು ವ್ಯಕ್ತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆಯೊಂದು ನಗರದ ಚಂದ್ರ ಲೇಔಟ್‌ನಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ವ್ಯಕ್ತಿ ರವಿ (ಹೆಸರು ಬದಲಾಯಿಸಲಾಗಿದೆ) ಮತ್ತು ಆತನ ಸ್ನೇಹಿತ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಆರೋಪಿಗಳು ಏಕಮುಖವಾಗಿ ಆಟೋ ಚಲಾಯಿಸಿಕೊಂಡು ಬಂದು ಪ್ರಿಯದರ್ಶಿನಿ ಲೇಔಟ್‌ನ ಜಸ್ಟ್ ಬೇಕ್ ಬಳಿ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ರವಿ ಅವರು ಸಂಚಾರ ನಿಯಮ ಪಾಲಿಸುವಂತೆ ಬುದ್ಧಿ ಹೇಳಿ, ಮುಂದೆ ಸಾಗಿದ್ದಾರೆ. ಬಳಿಕ ಆರೋಪಿಗಳು ರವಿ ಅವರ ವಾಹನವನ್ನು ಹಿಂಬಾಲಿಸಿಕೊಂಡು ಹೋಗಿದ್ದು, ಹತ್ಯೆಗೆ ಯತ್ನಿಸಿದ್ದಾರೆ.

ವಿಜಯನಗರದಿಂದ ನಾಗರಭಾವಿಯಲ್ಲಿರುವ ನನ್ನ ಮನೆಗೆ ಹೋಗುತ್ತಿದ್ದಾಗ ಜಸ್ಟ್ ಬೇಕ್ ಬಳಿ ನನ್ನ ಸ್ನೇಹಿತನನ್ನು ಭೇಟಿಯಾದೆ. ನಾವು ದಾರಿಯಲ್ಲಿ ಹೋಗುತ್ತಿದ್ದಾಗ ಏಕಮುಖವಾಗಿ ಆಟೋ ಬಂದಿತು. ಈ ವೇಳೆ ಸಂಚಾರ ನಿಯಮ ಪಾಲಿಸುವಂತೆ ಬುದ್ಧಿ ಹೇಳಲಾಯಿತು. ಬಳಿಕ ಆರೋಪಿಗಳು ನಮ್ಮನ್ನು ಬೆನ್ನಟ್ಟಿ ನನ್ನ ಮೇಲೆ ದಾಳಿ ಮಾಡಿದರು. ಪರಿಣಾಮ ನನ್ನ ಎಡ ಹುಬ್ಬಿನ ಕೆಳಗೆ ಮತ್ತು ಮೇಲಿನ ತುಟಿಯ ಮೇಲೆ ಆಳವಾದ ಗಾಯವಾಗಿದ್ದು, ಐದು ಹೊಲಿಗೆಗಳನ್ನು ಹಾಕಲಾಗಿದೆ.

ನನ್ನ ಮೇಲಷ್ಟೇ ಅಲ್ಲದೆ, ನನ್ನ ಸ್ನೇಹಿತನ ಮೇಲೂ ದಾಳಿ ಮಾಡಿದ್ದಾರೆ. ಆದರೆ, ಅವನಿಗೆ ಗಂಭೀರ ಗಾಯವಾಗಲಿಲ್ಲ. ಗಾಯದ ನಡುವಲ್ಲೂ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದೆ. ಬಳಿಕ ಸ್ಥಳೀಯರು ನಮ್ಮ ನೆರವಿಗೆ ಬಂದರು. ಬಳಿಕ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ರವಿ ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ಕೊಲೆ ಯತ್ನ (ಬಿಎನ್‌ಎಸ್ 109), ಅಪಾಯಕಾರಿ ಆಯುಧಗಳಿಂದ ಗಂಭೀರ ಗಾಯಗೊಳಿಸುವುದು (ಬಿಎನ್‌ಎಸ್ 118(1)), ಕ್ರಿಮಿನಲ್ ಬೆದರಿಕೆ (ಬಿಎನ್‌ಎಸ್ 351(2)), ಮತ್ತು ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು (ಬಿಎನ್‌ಎಸ್ 352) ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ, ದಾಳಿಗೊಳಗಾಗಿರುವ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT