ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ಜಾತಿ ಸಮೀಕ್ಷೆ ಕುರಿತ ಚರ್ಚೆಗೆ ಶೀಘ್ರದಲ್ಲೇ ವಿಶೇಷ ಸಂಪುಟ ಸಭೆ: ಸಚಿವ ಪರಮೇಶ್ವರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಸಮೀಕ್ಷೆ ಕುರಿತು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ನೀಡುವಂತೆ ಸಚಿವರಿಗೆ ಸೂಚನೆ ನೀಡಿದ್ದರು.

ಬೆಂಗಳೂರು: ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಚರ್ಚಿಸಲು ಸರ್ಕಾರ ವಿಶೇಷ ಸಂಪುಟ ಸಭೆ ನಡೆಸಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮಿತ ಸಂಪುಟ ಸಭೆಯಲ್ಲಿ ಸಿಗುವ ಅರ್ಧ ಗಂಟೆ ಅಥವಾ 10 ನಿಮಿಷಗಳಲ್ಲಿ ಸಮೀಕ್ಷೆ ಕುರಿತು ಚರ್ಚೆ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸರ್ಕಾರ ವಿಶೇಷ ಸಂಪುಟ ಸಭೆ ನಡೆಸಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಸಮೀಕ್ಷೆ ಕುರಿತು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ನೀಡುವಂತೆ ಸಚಿವರಿಗೆ ಸೂಚನೆ ನೀಡಿದ್ದರು. 11 ಸಚಿವರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ. ಉಳಿದ ಎಲ್ಲಾ ಸಚಿವರು ತಮ್ಮ ಅಭಿಪ್ರಾಯವನ್ನು ನೀಡಿದ ನಂತರ ವಿಶೇಷ ಸಂಪುಟ ಸಭೆ ನಡೆಸಿ, ಅಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಸಮುದಾಯಗಳ ಆಂತರಿಕ ಮೀಸಲಾತಿ ಸಮೀಕ್ಷೆ ಕುರಿತು ಮಾತನಾಡಿ, ಎಸ್‌ಸಿಗಳಿಗೆ ಆಂತರಿಕ ಮೀಸಲಾತಿಗಾಗಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಇನ್ನೂ ಒಂದು ತಿಂಗಳ ಸಮಯಾವಕಾಶ ಕೋರಿ ಕೆಲವು ನಾಯಕರು ಸಂಪರ್ಕಿಸಿದ್ದಾರೆ. ಸಮೀಕ್ಷೆ ನಡೆಸುತ್ತಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರಿಗೂ ಮನವಿ ಸಲ್ಲಿಸಲು ನಾನು ಅವರಿಗೆ ಸೂಚಿಸಿದ್ದೇನೆ. ಮೇ 23 ರವರೆಗೆ ಆಂತರಿಕ ಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ ಎಂಬ ವರದಿ ಕುರಿತು ಮಾತನಾಡಿ, ಅದರ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಸಮೀಕ್ಷೆಗಾಗಿ ಶಿಕ್ಷಕರು ನನ್ನ ಮನೆಗೆ ಬಂದಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ ಪರಿಣಾಮಕಾರಿಯಾಗಿ ನಡೆಯುತ್ತಿದೆ. ನಗರ ಪ್ರದೇಶಗಳಲ್ಲಿ ಕೆಲವು ನ್ಯೂನತೆಗಳಿರಬಹುದು ಎಂದು ಹೇಳಿದರು.

ಬಿಜೆಪಿಯ ತಿರಂಗ ಯಾತ್ರೆಯ ಕುರಿತು ಮಾತನಾಡಿ, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಮಸ್ಯೆ ರಾಷ್ಟ್ರೀಯ ಭದ್ರತೆಯ ಕುರಿತಾಗಿ ಆಗಿದೆ. ಇದನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಿದ್ದು, ನಾವೂ ಕೂಡ ಬೆಂಗಳೂರಿನಲ್ಲಿ ತಿರಂಗ ಯಾತ್ರೆ ನಡೆಸಿದ್ದೇವೆ. ಇದು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ನಾವು ನಡೆಸಿದ ತಿರಂಗ ಯಾತ್ರೆಯಲ್ಲಿ ರಾಜಕೀಯ ಅಥವಾ ಸಿದ್ಧಾಂತಗಳಿಗೆ ಒತ್ತು ನೀಡಲಿಲ್ಲ. ಆದರೆ, ಬಿಜೆಪಿ ಮಾಡುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT