ಹಡಗು (ಸಾಂದರ್ಭಿಕ ಚಿತ್ರ) 
ರಾಜ್ಯ

ಮಂಗಳೂರು: ಸಮುದ್ರದಲ್ಲಿ ಮುಳುಗಿದ ಹಡಗು, ಯಶಸ್ವಿ ಕಾರ್ಯಾಚರಣೆ ನಡೆಸಿ 6 ಮಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ!

ಮಂಗಳೂರು ಬಂದರಿನಿಂದ ಲಕ್ಷದ್ವೀಪದ ಕದ್ಮತ್ ದ್ವೀಪಕ್ಕೆ ತೆರಳುತ್ತಿದ್ದ ಎಂಎಸ್‌ವಿ ಸಲಾಮತ್, ಮೇ 14ರಂದು ಬೆಳಿಗ್ಗೆ 05.30ಕ್ಕೆ ಪ್ರವಾಹಕ್ಕೆ ಸಿಲುಕಿ ಮುಳುಗಿತ್ತು.

ಮಂಗಳೂರು: ಮಂಗಳೂರಿನ ನೈಋತ್ಯಕ್ಕೆ ಸುಮಾರು 60-70 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿದ ಎಂಎಸ್‌ವಿ ಸಲಾಮತ್ ಎಂಬ ಸರಕು ಸಾಗಣೆ ಹಡಗಿನ ಆರು ಸಿಬ್ಬಂದಿಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ (ಐಸಿಜಿ) ಯಶಸ್ವಿಯಾಗಿ ರಕ್ಷಿಸಿದೆ.

ಬುಧವಾರ ಮಧ್ಯಾಹ್ನ 12.15ರ ಸುಮಾರಿಗೆ ಕರ್ನಾಟಕದ ಸುರತ್ಕಲ್ ಕರಾವಳಿಯಿಂದ ಸುಮಾರು 52 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಹಡಗೊಂದು ಮುಳುಗಿದ್ದು ಅದರಲ್ಲಿದ್ದ ಆರು ಸಿಬ್ಬಂದಿಗಳು ಸಣ್ಣ ದೋಣಿ ಮೂಲಕ ಜೀವ ಉಳಿಸಿಕೊಂಡಿದ್ದರು. ಈ ಪ್ರದೇಶದಲ್ಲಿ ದಿನನಿತ್ಯದ ಗಸ್ತು ತಿರುಗುತ್ತಿದ್ದ ಐಸಿಜಿ ಹಡಗು ವಿಕ್ರಮ್ ಅನ್ನು ತಕ್ಷಣವೇ ಸ್ಥಳಕ್ಕೆ ತೆರಳಿದ್ದು ಆರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಮೇ 12ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪದ ಕದ್ಮತ್ ದ್ವೀಪಕ್ಕೆ ತೆರಳುತ್ತಿದ್ದ ಎಂಎಸ್‌ವಿ ಸಲಾಮತ್, ಮೇ 14ರಂದು ಬೆಳಿಗ್ಗೆ 05.30ಕ್ಕೆ ಪ್ರವಾಹಕ್ಕೆ ಸಿಲುಕಿ ಮುಳುಗಿತ್ತು. ರಕ್ಷಿಸಲ್ಪಟ್ಟ ಸಿಬ್ಬಂದಿಯನ್ನು ಇಸ್ಮಾಯಿಲ್ ಶರೀಫ್, ಅಲೆಮುನ್ ಅಹ್ಮದ್ ಭಾಯ್ ಘವ್ಡಾ, ಕಾಕಲ್ ಸುಲೇಮಾನ್ ಇಸ್ಮಾಯಿಲ್, ಅಕ್ಬರ್ ಅಬ್ದುಲ್ ಸುರಾನಿ, ಕಸಮ್ ಇಸ್ಮಾಯಿಲ್ ಮೇಪಾನಿ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ.

ಯಶಸ್ವಿ ರಕ್ಷಣೆಯ ನಂತರ, ಬದುಕುಳಿದವರಿಗೆ ಪ್ರಥಮ ಚಿಕಿತ್ಸೆ ನೀಡಿ ಸುರಕ್ಷಿತವಾಗಿ ನವ ಮಂಗಳೂರು ಬಂದರಿಗೆ ಸಾಗಿಸಲಾಯಿತು. ಅಲ್ಲಿ 2025ರ ಮೇ 15ರಂದು ಆಗಮಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT