ಗಾಯಕ ಸೋನು ನಿಗಮ್ 
ರಾಜ್ಯ

ಆಕ್ಷೇಪಾರ್ಹ ಹೇಳಿಕೆ: ಸೋನು ನಿಗಮ್ ವಿಚಾರಣೆಗೆ ಮುಂಬೈಗೆ ಹೊರಟ ಬೆಂಗಳೂರು ಪೊಲೀಸರು

ಆವಲಹಳ್ಳಿ ಪೊಲೀಸ್ ಠಾಣೆಯ ಒಬ್ಬ ಇನ್ಸ್‌ಪೆಕ್ಟರ್ ಮತ್ತು ಇತರ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ತಂಡ, ಸೋನು ನಿಗಮ್ ಅವರನ್ನು ವಿಚಾರಣೆ ಮಾಡಲು ಮುಂಬೈಗೆ ತೆರಳಲಿದೆ.

ಬೆಂಗಳೂರು: ‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು’ಎಂದು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಗಾಯಕ ಸೋನು ನಿಗಮ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ದಾಖಲಿಸಿಕೊಳ್ಳಲು ಬೆಂಗಳೂರು ಪೊಲೀಸ್ ತಂಡ ಮುಂಬೈಗೆ ಪ್ರಯಾಣಿಸಲಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆವಲಹಳ್ಳಿ ಪೊಲೀಸ್ ಠಾಣೆಯ ಒಬ್ಬ ಇನ್ಸ್‌ಪೆಕ್ಟರ್ ಮತ್ತು ಇತರ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ತಂಡ, ಸೋನು ನಿಗಮ್ ಅವರನ್ನು ವಿಚಾರಣೆ ಮಾಡಲು ಮುಂಬೈಗೆ ತೆರಳಲಿದೆ.

ಸೋನು ನಿಗಮ್ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಮತ್ತು ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಈ ಸಂಬಂಧ ಹಿರಿಯ ಅಧಿಕಾರಿಗಳು ತಂಡಕ್ಕೆ ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದು, ಕರ್ನಾಟಕ ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳಿಗೆ ಅನುಗುಣವಾಗಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ. ಅಲ್ಲದೆ ಪೊಲೀಸರು ಅವರನ್ನು ವಿಡಿಯೋ ಕರೆಯ ಮೂಲಕ ಪ್ರಶ್ನಿಸಬಹುದು ಅಥವಾ ವಿಚಾರಣೆ ನಡೆಸಲು ಅವರು ಇರುವ ಸ್ಥಳಕ್ಕೆ ಪ್ರಯಾಣಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ.

ಪೊಲೀಸರು ಈ ಹಿಂದೆ ಸೋನು ನಿಗಮ್ ಅವರಿಗೆ ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಮೇಲ್ ಮೂಲಕ ನೋಟಿಸ್ ಕಳುಹಿಸಿದ್ದರು. ಆದರೆ, ಗಾಯಕ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಗಾಯಕನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಸೋನು ನಿಗಮ್ ಇದ್ದಲ್ಲಿಗೇ ಹೋಗಿ ವಿಚಾರಣೆ ನಡೆಸಬೇಕು ಅಥವಾ ವಿಡಿಯೋ ಕಾಲ್ ಮೂಲಕ ವಿಚಾರಣೆ ಮಾಡಬೇಕು ಎಂದು ಹೇಳಿದೆ. ಅದರಂತೆ ಆವಲಹಳ್ಳಿ ಪೊಲೀಸರು ಇದೀಗ ವಿಡಿಯೋ ಕಾಲ್ ಬದಲಿಗೆ ನೇರವಾಗಿ ಮುಂಬೈಗೆ ಹೋಗಿ ಸೋನು ನಿಗಮ್ ಅವರನ್ನು ವಿಚಾರಣೆ ಮಾಡಲು ಮುಂದಾಗಿದ್ದಾರೆ.

ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೋನು ನಿಗಮ್ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT