ಬೆಂಗಳೂರಿನಲ್ಲಿ ಭಾರಿ ಮಳೆ 
ರಾಜ್ಯ

ಬೆಂಗಳೂರಿನಲ್ಲಿ ಭಾರಿ ಮಳೆ; ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಟ್ರಾಫಿಕ್​ ಜಾಮ್​; ರಾತ್ರಿ ವಾರ್ ರೂಮ್ ಗೆ ಡಿಕೆಶಿ ಭೇಟಿ

ಇಂದು ರಾತ್ರಿ 10 ಗಂಟೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ವಾರ್ ರೂಮ್ ಗೆ ಭೇಟಿ ನೀಡಿ, ಪರಿಶೀಲಿಸುತ್ತೇನೆ ಎಂದು ಡಿಸಿಎಂ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಕಳೆದ ಎರಡು ದಿನಗಳಿಂದ ಆರ್ಭಟಿಸುತ್ತಿದ್ದು, ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಸಿಲಿಕಾನ್ ಸಿಟಿಯ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಇಂದು ಸಂಜೆ 6:30 ಸುಮಾರಿಗೆ ಆರಂಭವಾದ ಮಳೆ ರಾತ್ರಿ 8:30ರ ವರೆಗೆ ಧಾರಾಕಾರವಾಗಿ ಸುರಿದಿದೆ. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್​ ಸರ್ಕಲ್​, ಕಾರ್ಪೊರೇಷನ್, ಕಬ್ಬನ್​ಪಾರ್ಕ್, ಚಿನ್ನಸ್ವಾಮಿ ಕ್ರೀಡಾಂಗಣ, ವಿಧಾನಸೌಧ, ಕೆ.ಆರ್​.ಮಾರ್ಕೆಟ್, ಮೆಜೆಸ್ಟೆಕ್​, ರಾಜಾಜಿನಗರ, ಲಾಲ್​ಬಾಗ್​, ಜಯನಗರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.

ಭಾರಿ ಮಳೆಯಿಂದಾಗಿ ನಗರದ ಹಲವು ರಸ್ತೆಗಳು ಕೆರೆಯಂತಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಹಲವು ಕಡೆ ಕಿಲೋಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿದೆ.

ಹೆಬ್ಬಾಳದಲ್ಲಿ ಮಳೆ ಬರುತ್ತಿರುವುದರಿಂದ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿದೆ. ಹಾಗೆ, ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ, ಬಾಗಲೂರು ಕಡೆಯಿಂದ ನಗರ ಮತ್ತು ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ರಸ್ತೆಯಲ್ಲಿ ಮತ್ತು ನ್ಯಾಷನಲ್ ಗೇಮ್ಸ್ ವಿಲೇಜ್ ಗೆಟ್​ನಿಂದ ಸೋನಿ ವರ್ಲ್ಡ್ ಜಂಕ್ಷನ್ ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಿಧಾನವಾಗಿ ಚಲಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ರಾತ್ರಿ ವಾರ್ ರೂಮ್ ಗೆ ಡಿಸಿಎಂ ಭೇಟಿ

ಇಂದು ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾಗಿರುವ ಅವಾಂತರಗಳ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾನು ಪ್ರವಾಸದಿಂದ ಈಗ ಬಂದಿದ್ದೇನೆ. ರಾತ್ರಿ ವಾರ್ ರೂಮ್ ಗೆ ಭೇಟಿ ನೀಡುತ್ತೇನೆ ಎಂದರು.

ಇಂದು ರಾತ್ರಿ 10 ಗಂಟೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ವಾರ್ ರೂಮ್ ಗೆ ಭೇಟಿ ನೀಡಿ, ಪರಿಶೀಲಿಸುತ್ತೇನೆ ಎಂದು ಡಿಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಗು ದೀರ್ಘಕಾಲ ಉಳಿಯಲ್ಲ: ಶಾಂತಿ ಪ್ರಸ್ತಾವನೆ ಮಾತುಕತೆ ನಡುವೆ ಟ್ರಂಪ್ ಎಚ್ಚರಿಕೆ!

3 ವರ್ಷ ಪೂರೈಸುವ ಮುನ್ನ ದೆಹಲಿಗೆ ಸಿದ್ದರಾಮಯ್ಯ ದೌಡು: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!

ಹಿಮದ ಮಡಲಲ್ಲಿ ವಿಷ್ಣುವಿನ ಸನ್ನಿಧಿ: ಭಕ್ತಿ–ಪ್ರಕೃತಿಯ ಅಪೂರ್ವ ಸಂಗಮ ಬದರಿನಾಥ, ಆಧ್ಯಾತ್ಮಿಕ ಯಾತ್ರೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

IPL ಇತಿಹಾಸದಲ್ಲಿಯೇ ಶರವೇಗದಲ್ಲಿ ಅರ್ಧಶತಕ: ಉರ್ವಿಲ್ ಪಟೇಲ್ ಬ್ಯಾಟಿಂಗ್ ನೋಡುತ್ತಾ ನಿಂತ ಕೊಹ್ಲಿ! Video ವೈರಲ್

ರಾಹುಲ್- ವಿಜಯ್ ದೋಸ್ತಿಗೆ ಬೆದರಿತೆ ಕೇಂದ್ರ ಸರ್ಕಾರ? ರೀಲ್, ಪೋಟೋ, ಪೋಸ್ಟ್ ಬ್ಲಾಕ್ ಮಾಡಿದ Instagram? ಕಾಂಗ್ರೆಸ್ ಆರೋಪ

SCROLL FOR NEXT