ಬೆಂಗಳೂರು (ಸಂಗ್ರಹ ಚಿತ್ರ) online desk
ರಾಜ್ಯ

ಪಟ್ಟಂದೂರು ಅಗ್ರಹಾರ, ಹೆಬ್ಬಾಳದ ಈ ರಸ್ತೆಗಳಲ್ಲಿ 4 ದಿನ ವಾಹನ ಸಂಚಾರ ನಿರ್ಬಂಧ; ಪರ್ಯಾಯ ಮಾರ್ಗದ ಬಗ್ಗೆ ಇಲ್ಲಿದೆ ವಿವರ

ಮೇ.18 ದಿಂದ ನಾಲ್ಕು ದಿನಗಳ ಕಾಲ ಈ ಮಾರ್ಗದಲ್ಲಿ ದೀಪೋತ್ಸವ ಮತ್ತು ದೇವರ ಪಲ್ಲಕ್ಕಿಗಳ ಉತ್ಸವಗಳ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು: ವೈಟ್ ಫೀಲ್ಡ್ ಗೆ ಸಂಪರ್ಕ ಕಲ್ಪಿಸುವ ಪಟ್ಟಂದೂರು ಅಗ್ರಹಾರದ ಕೆಲವು ರಸ್ತೆಗಳಲ್ಲಿ ಮೇ.18 ರಿಂದ 4 ದಿನಗಳ ಕಾಲ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮೇ.18 ದಿಂದ ನಾಲ್ಕು ದಿನಗಳ ಕಾಲ ಈ ಮಾರ್ಗದಲ್ಲಿ ದೀಪೋತ್ಸವ ಮತ್ತು ದೇವರ ಪಲ್ಲಕ್ಕಿಗಳ ಉತ್ಸವಗಳ ಕಾರ್ಯಕ್ರಮ ನಡೆಯಲಿದೆ. ವಾಹನ ಸಂಚಾರವನ್ನು ನಿರ್ಬಂಧಿಸಲಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಪರ್ಯಾಯ ಮಾರ್ಗವನ್ನು ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

ಮೇ. 18 ಮದ್ಯಾಹ್ನ 02.00 ಗಂಟೆಯಿಂದ ಬುಧವಾರ (ಮೇ. 21) ಸಂಜೆ 6 ಗಂಟೆಯವರೆಗೆ ಪಟ್ಟಂದೂರು ಅಗ್ರಹಾರ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ

ಐಟಿಪಿಎಲ್ ಕಡೆಯಿಂದ ಪಟ್ಟಂದೂರು ಅಗ್ರಹಾರ ಮಾರ್ಗವಾಗಿ ನಲ್ಲೂರಹಳ್ಳಿ ವೈಟ್ ಫೀಲ್ಡ್ ಕಡೆಗೆ ಸಂಚರಿಸುವ ವಾಹನಗಳು ಸತ್ಯಸಾಯಿ ಆಸ್ಪತ್ರೆ ವೈದೇಹಿ ಜಿ.ಇ ಕ್ರಾಸ್ ಮೂಲಕ ಸಾಗಬಹುದು.

ಇಮ್ಮಡಿಹಳ್ಳಿ ವೈಟ್ಫೀಲ್ಡ್ ಕಡೆಯಿಂದ ಪಟ್ಟಂದೂರು ಅಗ್ರಹಾರ ಮಾರ್ಗವಾಗಿ ಐಟಿಪಿಎಲ್ ಮತ್ತು ನಲ್ಲೂರಹಳ್ಳಿ ಕಡೆಗೆ ಸಂಚರಿಸುವ ಲಘು ವಾಹನಗಳು ಇ.ಸಿ.ಸಿ ರಸ್ತೆ, ಹೋಫ್ ಫಾರಂ ರಸ್ತೆ ಮೂಲಕ ಐಟಿಪಿಎಲ್ ಕಡೆಗೆ ಸಂಚರಿಸಬಹುದಾಗಿದೆ.

ಹೆಬ್ಬಾಳ ಮೇಲೇತುವೆಯಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲೇತುವೆಗೆ ಹೆಚ್ಚುವರಿ ಬ್ಯಾಂಪ್​ಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಕಾಮಗಾರಿಯ ಭಾಗವಾಗಿ, ರೈಲ್ವೆ ಹಳಿಗಳ ಮೇಲೆ 33.5 ಮೀ ಉದ್ದದ 07 ಉಕ್ಕಿನ ಗರ್ಡ್​ಗಳನ್ನು ಅಳವಡಿಸುವ ಕಾಮಗಾರಿ ಮೇ.17 ದಿಂದ ಬುಧವಾರ (ಮೇ.21) ವರೆಗೆ ರಾತ್ರಿ 12:00 ರಿಂದ ಬೆಳಗಿನ ಜಾವ 03:00 ರವರೆಗೆ ನಡೆಯುತ್ತದೆ. ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರ ಮಾರ್ಪಾಡು ಮಾಡಿದ್ದಾರೆ.

ಪರ್ಯಾಯ ಮಾರ್ಗ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟ್ರೀಮ್ ಮಾಲ್‌ನಲ್ಲಿರುವ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲಕ್ಕೆ ಬಲ ತಿರುವು ಪಡೆದು ತುಮಕೂರು ಮಾರ್ಗವಾಗಿ ಚಲಿಸಿ, ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ವೃತ್ತವನ್ನು ತಲುಪಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

34 ಮಾನವ ಬಾಂಬ್‌, 400 ಕೆಜಿ RDX 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ- ಎಲ್ಲೆಡೆ ಕಟ್ಟೆಚ್ಚರ!

'Delhi Metroಗೆ ಹೋಲಿಕೆ ಮಾಡಿದರೆ Bengaluru Metro ದರ ಅತ್ಯಂತ ದುಬಾರಿ': BMRCL, ರಾಜ್ಯ ಸರ್ಕಾರದ ವಿರುದ್ಧ Tejasvi Surya ಕಿಡಿ!

"Dismantle India": 'ಭಾರತವನ್ನು ಕೆಡವಿ, ವಿಭಜಿಸಿ' ಎಂದ ಆಸ್ಟ್ರಿಯಾ ಅರ್ಥಶಾಸ್ತ್ರಜ್ಞನ 'X' ಖಾತೆ ನಿಷೇಧ!

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

ನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; ವಿಡಿಯೋ ವೈರಲ್

SCROLL FOR NEXT