ಉಪ ತಹಶಿಲ್ದಾರ್ ಕಚೇರಿಯಲ್ಲಿ ಯುವಕನ ಮೇಲೆ ಹಲ್ಲೆ 
ರಾಜ್ಯ

ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ: ಗದಗ ತಹಶಿಲ್ದಾರ್ ಕಚೇರಿಯಲ್ಲಿ ಅಮಾನವೀಯ ಘಟನೆ

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ.

ಗದಗ: ನ್ಯಾಯ ಕೇಳಲು ಬಂದ ಯುವಕನಿಗೆ ಉಪ ತಹಶಿಲ್ದಾರ್ ಹಾಗೂ ಅವರ ಜೊತೆಗಿದ್ದವರು ಹಲ್ಲೆ ನಡೆಸಿದ ಘಟನೆ ಗದಗದ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ. ಘಟನೆ ಕುರಿತು ತಪ್ಪಿತಸ್ಥರನ್ನು ಗುರುತಿಸಲು ಅಕ್ಷಯ್ ತಹಶಿಲ್ದಾರ್ ಕಚೇರಿಗೆ ಹೋಗಿದ್ದನು. ಅಕ್ಷಯ್ ಪ್ರಶ್ನೆಗೆ ಕೆರಳಿದ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಹಾಗೂ ಅವರ ತಂಡ ಅಕ್ಷಯ್ ನನ್ನು ಕಚೇರಿಗೆ ಕರೆಸಿಕೊಂಡು ಹಲ್ಲೆ ನಡೆಸಿದರು ಎಂದು ಹೇಳಲಾಗುತ್ತಿದೆ.

ಘಟನೆ ಸುದ್ದಿಯಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಪೊಲೀಸ್ ಅಧಿಕಾರಿಗಳೋರ್ವರು ರಾಜಿ ಸಂಧಾನ ಮಾಡಿದ್ದಾರೆ ಎನ್ನುವುದು ಕೂಡ ಸುದ್ದಿಯಾಗಿದೆ. ಘಟನೆ ಬಗ್ಗೆ ಸಂಪೂರ್ಣ ವಿವರ ತಿಳಿಯಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT