ಉಪ ತಹಶಿಲ್ದಾರ್ ಕಚೇರಿಯಲ್ಲಿ ಯುವಕನ ಮೇಲೆ ಹಲ್ಲೆ 
ರಾಜ್ಯ

ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ: ಗದಗ ತಹಶಿಲ್ದಾರ್ ಕಚೇರಿಯಲ್ಲಿ ಅಮಾನವೀಯ ಘಟನೆ

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ.

ಗದಗ: ನ್ಯಾಯ ಕೇಳಲು ಬಂದ ಯುವಕನಿಗೆ ಉಪ ತಹಶಿಲ್ದಾರ್ ಹಾಗೂ ಅವರ ಜೊತೆಗಿದ್ದವರು ಹಲ್ಲೆ ನಡೆಸಿದ ಘಟನೆ ಗದಗದ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ. ಘಟನೆ ಕುರಿತು ತಪ್ಪಿತಸ್ಥರನ್ನು ಗುರುತಿಸಲು ಅಕ್ಷಯ್ ತಹಶಿಲ್ದಾರ್ ಕಚೇರಿಗೆ ಹೋಗಿದ್ದನು. ಅಕ್ಷಯ್ ಪ್ರಶ್ನೆಗೆ ಕೆರಳಿದ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಹಾಗೂ ಅವರ ತಂಡ ಅಕ್ಷಯ್ ನನ್ನು ಕಚೇರಿಗೆ ಕರೆಸಿಕೊಂಡು ಹಲ್ಲೆ ನಡೆಸಿದರು ಎಂದು ಹೇಳಲಾಗುತ್ತಿದೆ.

ಘಟನೆ ಸುದ್ದಿಯಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಪೊಲೀಸ್ ಅಧಿಕಾರಿಗಳೋರ್ವರು ರಾಜಿ ಸಂಧಾನ ಮಾಡಿದ್ದಾರೆ ಎನ್ನುವುದು ಕೂಡ ಸುದ್ದಿಯಾಗಿದೆ. ಘಟನೆ ಬಗ್ಗೆ ಸಂಪೂರ್ಣ ವಿವರ ತಿಳಿಯಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!