ಉಪ ತಹಶಿಲ್ದಾರ್ ಕಚೇರಿಯಲ್ಲಿ ಯುವಕನ ಮೇಲೆ ಹಲ್ಲೆ 
ರಾಜ್ಯ

ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ: ಗದಗ ತಹಶಿಲ್ದಾರ್ ಕಚೇರಿಯಲ್ಲಿ ಅಮಾನವೀಯ ಘಟನೆ

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ.

ಗದಗ: ನ್ಯಾಯ ಕೇಳಲು ಬಂದ ಯುವಕನಿಗೆ ಉಪ ತಹಶಿಲ್ದಾರ್ ಹಾಗೂ ಅವರ ಜೊತೆಗಿದ್ದವರು ಹಲ್ಲೆ ನಡೆಸಿದ ಘಟನೆ ಗದಗದ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಕ್ಷಯ್ ಬೊಳ್ಳೊಳ್ಳಿ ಎಂಬ ಯುವಕನ ಗೆಳೆಯನ ಬೈಕ್ ಗೆ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಅವರ ಪರಿಚಯಸ್ಥನ ಕಾರು ಡಿಕ್ಕಿ ಹೊಡೆದ ಘಟನೆ ಕಚೇರಿ ಹತ್ತಿರವೇ ಸಂಭವಿಸಿದೆ. ಘಟನೆ ಕುರಿತು ತಪ್ಪಿತಸ್ಥರನ್ನು ಗುರುತಿಸಲು ಅಕ್ಷಯ್ ತಹಶಿಲ್ದಾರ್ ಕಚೇರಿಗೆ ಹೋಗಿದ್ದನು. ಅಕ್ಷಯ್ ಪ್ರಶ್ನೆಗೆ ಕೆರಳಿದ ಉಪ ತಹಶಿಲ್ದಾರ್ ಎಸ್ ಡಿ ವಾಲ್ಮೀಕಿ ಹಾಗೂ ಅವರ ತಂಡ ಅಕ್ಷಯ್ ನನ್ನು ಕಚೇರಿಗೆ ಕರೆಸಿಕೊಂಡು ಹಲ್ಲೆ ನಡೆಸಿದರು ಎಂದು ಹೇಳಲಾಗುತ್ತಿದೆ.

ಘಟನೆ ಸುದ್ದಿಯಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಪೊಲೀಸ್ ಅಧಿಕಾರಿಗಳೋರ್ವರು ರಾಜಿ ಸಂಧಾನ ಮಾಡಿದ್ದಾರೆ ಎನ್ನುವುದು ಕೂಡ ಸುದ್ದಿಯಾಗಿದೆ. ಘಟನೆ ಬಗ್ಗೆ ಸಂಪೂರ್ಣ ವಿವರ ತಿಳಿಯಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT