ಸಂಗ್ರಹ ಚಿತ್ರ 
ರಾಜ್ಯ

ಕುಂದಾಪುರ: ರಸ್ತೆಗೆ ಅಡ್ಡಲಾಗಿ ಪಾಕ್ ಧ್ವಜ ಹಾಸಿ ಕೋಮು ಸಂಘರ್ಷಕ್ಕೆ ಪ್ರಚೋದನೆ, ಪ್ರಕರಣ ದಾಖಲು

ಕುಂದಾಪುರದ ಜಪ್ತಿ ಗ್ರಾಮದ ನಿವಾಸಿಯೊಬ್ಬರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕಾಗಿ ತಮ್ಮ ಮೋಟಾರ್ ಸೈಕಲ್‌ನಲ್ಲಿ ಕಲವಾರದಿಂದ ಜಪ್ತಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

ಉಡುಪಿ: ಕುಂದಾಪುರದಲ್ಲಿ ರಸ್ತೆಗೆ ಅಡ್ಡಲಾಗಿ ಪಾಕಿಸ್ತಾನ ರಾಷ್ಟ್ರಧ್ವಜದ ಪ್ಲಾಸ್ಟಿಕ್ ಬ್ಯಾನರ್ ಹಾಸಿ, ಕೋಮು ಸಂಘರ್ಷ ಪ್ರಚೋದನೆಗೆ ಕೆಲ ಕಿಡಿಗೇಡಿಗಳು ಯತ್ನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕುಂದಾಪುರದ ಜಪ್ತಿ ಗ್ರಾಮದ ನಿವಾಸಿಯೊಬ್ಬರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕಾಗಿ ತಮ್ಮ ಮೋಟಾರ್ ಸೈಕಲ್‌ನಲ್ಲಿ ಕಲವಾರದಿಂದ ಜಪ್ತಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ, ಕಲವಾರ-ಜಪ್ತಿ ರಸ್ತೆಯಲ್ಲಿರುವ ದಬ್ಬೆ ಕಟ್ಟೆ ಎಂಬ ಸ್ಥಳವನ್ನು ತಲುಪಿದಾಗ, ರಸ್ತೆಯ ಮೇಲೆ ಯಾರೋ ಕಿಡಿಗೇಡಿಗಳು ಪಾಕ್ ಧ್ವಜದ ಪ್ಲಾಸ್ಟಿಕ್ ಬ್ಯಾನರನ್ನು ರಸ್ತೆಗೆ ಮೊಳೆ ಹೊಡೆದು ಹಾಸಿರುವುದು ಕಂಡು ಬಂದಿತು. ಬಳಿಕ ಮೋಟಾರ್ ಸೈಕಲ್ ಅನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ, ಸುಮಾರು 300 ಮೀಟರ್ ಮುಂದೆ ಸಾಗಿ ನೋಡಿದಾಗ ಅದೇ ರೀತಿ ರಸ್ತೆಗೆ ಪ್ಲಾಸ್ಟಿಕ್ ಬ್ಯಾನರನ್ನು ಹಾಸಿದ್ದರು.

ವಾಹನ ಸಂಚಾರಕ್ಕೆ ಅಡ್ಡಿಯಾಗಬಾರದೆಂದು ಇದನ್ನು ಅಲ್ಲಿಂದ ತೆಗೆದು, ಬದಿಗೆ ಹಾಕಿದೆ ಎಂದು ವ್ಯಕ್ತಿ ಹೇಳಿದ್ದಾರೆ. ಅಲ್ಲದೆ, ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕೆಲವು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಈ ಪ್ಲಾಸ್ಟಿಕ್ ಧ್ವಜಗಳನ್ನು ಹರಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತೋರುತ್ತದೆ. ರಸ್ತೆ ಮಧ್ಯದಲ್ಲಿ ಈ ಬ್ಯಾನರ್‌ಗಳು ಅಪಘಾತಕ್ಕೆ ಕಾರಣವಾಗಬಹುದೆಂದು ಆತಂಕಗೊಂಡ ಅವುಗಳನ್ನು ತೆಗೆದು ರಸ್ತೆಬದಿಯಲ್ಲಿ ಇರಿಸಿದೆ ಎಂದು ದೂರುದಾರ ಹೇಳಿದ್ದಾರೆ.

ದೂರು ಹಿನ್ನೆಲೆಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 285 ಮತ್ತು 292 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT