ಭಾನುವಾರ ರಾತ್ರಿ ಸುರಿದ ಮಳೆಯಿಂದ ವಾಹನ ಸವಾರರ ಪರದಾಟ 
ರಾಜ್ಯ

ಹವಾಮಾನ: ಬೆಂಗಳೂರಿನಲ್ಲಿ ಎರಡು ದಿನ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ: IMD Weather Report!

ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತವಾಗಿದ್ದವು.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೂ ಆಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎನ್ ಪುವಿಯರಸು ತಿಳಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಅವರು, ಸದ್ಯದ ಚಂಡಮಾರುತದ ಪ್ರಕಾರ, ವಿಶೇಷವಾಗಿ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತವಾಗಿದ್ದವು. ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಸಣ್ಣಪುಟ್ಟ ಸಂಚಾರ ದಟ್ಟಣೆ ಹಾಗೂ ಮರ, ರೆಂಬೆ, ಕೊಂಬೆಗಳು ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಗುರುವಾರದವರೆಗೂ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಭಾನುವಾರ ನೀಡಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದಲ್ಲಿ ಮಳೆಯಾಗಲಿದೆ ಎಂದು ಹೇಳಿತ್ತು.

ಇಂದು ಬೆಳಗ್ಗೆ ನೀಡಿರುವ ಹೇಳಿಕೆ ಪ್ರಕಾರ, ಚಂಡಮಾರುತವು ಆಗ್ನೇಯ ಬಂಗಾಳ ಕೊಲ್ಲಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವ್ಯಾಪಿಸಿದ್ದು, ದಕ್ಷಿಣ ಭಾರತದಾದ್ಯಂತ ಮಳೆಯನ್ನು ತೀವ್ರಗೊಳಿಸುತ್ತಿದೆ.

IMD ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 103 ಮಿಮೀ ಮಳೆಯಾಗಿದೆ. ಇದುವರೆಗೆ ಅತಿ ಹೆಚ್ಚು ಮಳೆ ಪೀಡಿತ ಪ್ರದೇಶಗಳಲ್ಲಿ ಬೆಂಗಳೂರು ಒಂದಾಗಿದೆ ಮಹದೇವಪುರ ವಲಯದ ಹೊರಮಾವುನಲ್ಲಿರುವ ಸಾಯಿ ಲೇಔಟ್ ನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ 4-5 ಅಡಿ ನೀರು ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಹಾಗೂ ಪ್ರಯಾಣಿಕರು ತೀವ್ರವಾಗಿ ಪರದಾಡುವಂತಾಯಿತು. ಚರಂಡಿಗಳು ಮುಚ್ಚಿಹೋಗಿದ್ದು, ಹಲವು ಬಾರಿ ದೂರು ನೀಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಟ್ಯಾನರಿ ರಸ್ತೆಯ ಎನ್‌ಸಿ ಕಾಲೋನಿಯ ಮನೆಗಳಿಗೂ ನೀರು ನುಗ್ಗಿದೆ.

ಜಯನಗರದಲ್ಲಿ ಭಾರೀ ಮಳೆಗೆ ಮರವೊಂದು ನಿಂತಿದ್ದ ಕಾರು ಮತ್ತು ಜೀಪಿನ ಮೇಲೆ ಬಿದಿದ್ದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಈಸ್ಟ್ ಎಂಡ್ ಬಳಿ ಮೌಂಟ್ ಕಾರ್ಮೆಲ್ ಸ್ಕೂಲ್ ಕಡೆಗೆ ತೆರಳುವ ಮಾರ್ಗದಲ್ಲಿ ಮರವೊಂದು ಬಿದ್ದಿದ್ದರಿಂದ ಆ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ನಗರದ ವಿವಿಧೆಡೆ ರಸ್ತೆಗಳು ಜಲಾವೃತಗೊಂಡ, ಜನರು ತೀವ್ರ ತೊಂದರೆ ಎದುರಿಸುವಂತಾಯಿತು. ಮಾನ್ಯತಾ ಟೆಕ್ ಪಾರ್ಕ್ ಬಳಿಯೂ ವಾಹನ ಸಂಚಾರ ನಿಧಾನವಾಗಿತ್ತು. ರಾಜ್ಯದ ಹಲವು ಭಾಗಗಳಲ್ಲಿ ವಿಶೇಷವಾಗಿ ಮಲೆನಾಡು ಪ್ರದೇಶ ಮತ್ತು ಕರಾವಳಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT