ಬ್ಯಾಂಕ್ ಉದ್ಯೋಗಿಯ ಉದ್ಧಟತನ  online desk
ರಾಜ್ಯ

'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿರಿಕ್; Video viral

ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನವಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.

ಬೆಂಗಳೂರಿನ ಸರ್ಜಾಪುರದ ಬಳಿಯ ಎಸ್ ಬಿಐ ಬ್ಯಾಂಕ್ಸ್ ಶಾಖೆಯಲ್ಲಿ ಈ ಘಟನೆ ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಮೊಂಡುತನದ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ, ಆಕ್ರೋಶ ವ್ಯಕ್ತವಾಗತೊಡಗಿದೆ.

ದಾಖಲಾಗಿರುವ ವಿಡಿಯೋ ಪ್ರಕಾರ ಇಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರು ಹಲವು ವರ್ಷಗಳಿಂದ ಬೆಂಗಳೂರಿನಲ್ಲೇ ಇದ್ದರೂ ಗ್ರಾಹಕರೊಟ್ಟಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದಾರೆ. ಇದನ್ನು ಗ್ರಾಹಕರು ಪ್ರಶ್ನಿಸಿದ್ದಾರೆ.

ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಕನ್ನಡಪರ ಹೋರಾಟಗಾರರು ಈವಿಡಿಯೋವನ್ನು ಹಂಚಿಕೊಂಡಿದ್ದು, ಬ್ಯಾಂಕ್ ನ್ನು ಟ್ಯಾಗ್ ಮಾಡಿ ಉದ್ಧಟತನ ತೋರಿರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕೋರಮಂಗಲದ ಹೋಟೆಲ್ ಒಂದರಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಬರಹವನ್ನು ಪ್ರದರ್ಶನ ಫಲಕದಲ್ಲಿ ಬರೆಯಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

SCROLL FOR NEXT