ಬ್ಯಾಂಕ್ ಉದ್ಯೋಗಿಯ ಉದ್ಧಟತನ  online desk
ರಾಜ್ಯ

'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿರಿಕ್; Video viral

ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನವಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.

ಬೆಂಗಳೂರಿನ ಸರ್ಜಾಪುರದ ಬಳಿಯ ಎಸ್ ಬಿಐ ಬ್ಯಾಂಕ್ಸ್ ಶಾಖೆಯಲ್ಲಿ ಈ ಘಟನೆ ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಮೊಂಡುತನದ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ, ಆಕ್ರೋಶ ವ್ಯಕ್ತವಾಗತೊಡಗಿದೆ.

ದಾಖಲಾಗಿರುವ ವಿಡಿಯೋ ಪ್ರಕಾರ ಇಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರು ಹಲವು ವರ್ಷಗಳಿಂದ ಬೆಂಗಳೂರಿನಲ್ಲೇ ಇದ್ದರೂ ಗ್ರಾಹಕರೊಟ್ಟಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದಾರೆ. ಇದನ್ನು ಗ್ರಾಹಕರು ಪ್ರಶ್ನಿಸಿದ್ದಾರೆ.

ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಕನ್ನಡಪರ ಹೋರಾಟಗಾರರು ಈವಿಡಿಯೋವನ್ನು ಹಂಚಿಕೊಂಡಿದ್ದು, ಬ್ಯಾಂಕ್ ನ್ನು ಟ್ಯಾಗ್ ಮಾಡಿ ಉದ್ಧಟತನ ತೋರಿರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕೋರಮಂಗಲದ ಹೋಟೆಲ್ ಒಂದರಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಬರಹವನ್ನು ಪ್ರದರ್ಶನ ಫಲಕದಲ್ಲಿ ಬರೆಯಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT