ಬ್ಯಾಂಕ್ ಉದ್ಯೋಗಿಯ ಉದ್ಧಟತನ  online desk
ರಾಜ್ಯ

'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿರಿಕ್; Video viral

ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನವಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.

ಬೆಂಗಳೂರಿನ ಸರ್ಜಾಪುರದ ಬಳಿಯ ಎಸ್ ಬಿಐ ಬ್ಯಾಂಕ್ಸ್ ಶಾಖೆಯಲ್ಲಿ ಈ ಘಟನೆ ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಮೊಂಡುತನದ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ, ಆಕ್ರೋಶ ವ್ಯಕ್ತವಾಗತೊಡಗಿದೆ.

ದಾಖಲಾಗಿರುವ ವಿಡಿಯೋ ಪ್ರಕಾರ ಇಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರು ಹಲವು ವರ್ಷಗಳಿಂದ ಬೆಂಗಳೂರಿನಲ್ಲೇ ಇದ್ದರೂ ಗ್ರಾಹಕರೊಟ್ಟಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದಾರೆ. ಇದನ್ನು ಗ್ರಾಹಕರು ಪ್ರಶ್ನಿಸಿದ್ದಾರೆ.

ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಕನ್ನಡಪರ ಹೋರಾಟಗಾರರು ಈವಿಡಿಯೋವನ್ನು ಹಂಚಿಕೊಂಡಿದ್ದು, ಬ್ಯಾಂಕ್ ನ್ನು ಟ್ಯಾಗ್ ಮಾಡಿ ಉದ್ಧಟತನ ತೋರಿರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕೋರಮಂಗಲದ ಹೋಟೆಲ್ ಒಂದರಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಬರಹವನ್ನು ಪ್ರದರ್ಶನ ಫಲಕದಲ್ಲಿ ಬರೆಯಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT