ಬೆಂಗಳೂರು ಮಳೆ  
ರಾಜ್ಯ

ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ

ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ 1 ವಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಅದರಲ್ಲೂ ಮಂಗಳವಾರ ಮತ್ತು ಬುಧವಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ಮತ್ತು ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ವರದಿಯಂತೆ ಮಂಗಳವಾರ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಭಾಗವಾಗಿರುವ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಬಿರುಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ (ಗಂಟೆಗೆ 40-50 ಕಿ.ಮೀ) ಬಿರುಗಾಳಿಯೊಂದಿಗೆ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ ವಿಜಯಪುರ ಗದಗ ಮತ್ತು ಕೊಪ್ಪಳ ಮತ್ತು ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನಲ್ಲಿ, ಒಂದು ಅಥವಾ ಎರಡು ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಾದ್ಯಂದ ಮುಂದಿನ 7 ದಿನಗಳವರೆಗೆ ಇದೇ ರೀತಿಯ ಹವಾಮಾನ ಪರಿಸ್ಥಿತಿ ಕಂಡುಬರಬಹುದು, ಆದರೆ ಸ್ಥಳಗಳಲ್ಲಿ ಸ್ವಲ್ಪ ವ್ಯತ್ಯಾಸವಿರಬಹುದು. ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಸಮಯದಲ್ಲಿ ಮೀನುಗಾರ ಸಮುದಾಯ ಸಮುದ್ರಕ್ಕೆ ಇಳಿಯಬಾರದು ಎಂದು ಐಎಂಡಿ ಸಲಹೆ ನೀಡಿದೆ.

ಭಾರೀ ಮಳೆಯ ಸಮಯದಲ್ಲಿ ಜನರು ಹೊರಗೆ ಹೋಗಬಾರದು ಮತ್ತು ಆಶ್ರಯಕ್ಕಾಗಿ ಮರಗಳ ಕೆಳಗೆ ನಿಲ್ಲಬಾರದು ಎಂದೂ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT