100ಕೆಜಿ ಅಖಂಡ ಬೆಳ್ಳಿ ದೀಪ ಅರ್ಪಿಸಿದ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ 
ರಾಜ್ಯ

ತಿರುಪತಿ ತಿಮ್ಮಪ್ಪನಿಗೆ 100 ಕೆಜಿ ಅಖಂಡ ಬೆಳ್ಳಿ ದೀಪ ಅರ್ಪಿಸಿದ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ

ಭಕ್ತಿ ಮತ್ತು ರಾಜ ಪರಂಪರೆಯ ಸಂಕೇತವಾಗಿ ಮೈಸೂರು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿರುಮಲ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ಎರಡು ದೊಡ್ಡ ಬೆಳ್ಳಿ ದೀಪಗಳನ್ನು ದಾನ ಮಾಡಿದರು.

ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ತಿರುಮಲ ತಿರುಪತಿ ದೇವಸ್ಥಾನಕ್ಕೆ 100 ಕೆಜಿ ತೂಕದ ಅಖಂಡ ಬೆಳ್ಳಿ ದೀಪಗಳನ್ನು ಅರ್ಪಿಸಿ 300 ವರ್ಷಗಳ ಸಂಪ್ರದಾಯವನ್ನು ಪುನರುಜ್ಜೀವನಗೊಳಿಸಿದ್ದಾರೆ.

ಆಳೆತ್ತರದ ಬೆಳ್ಳಿ ದೀಪಗಳು ಇನ್ನುಮುಂದೆ ತಿರುಮಲ ದೇವಸ್ಥಾನಕ್ಕೆ ಬೆಳಗಲಿವೆ. ಭಕ್ತಿ ಮತ್ತು ರಾಜ ಪರಂಪರೆಯ ಸಂಕೇತವಾಗಿ ಮೈಸೂರು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿರುಮಲ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ಎರಡು ದೊಡ್ಡ ಬೆಳ್ಳಿ ದೀಪಗಳನ್ನು ದಾನ ಮಾಡಿದರು.

ರಂಗನಾಯಕಕುಲ ಮಂಟಪದಲ್ಲಿ ನಡೆದ ಅಧಿಕೃತ ಹಸ್ತಾಂತರ ಸಮಾರಂಭದಲ್ಲಿ ದೇವಾಲಯ ಆಡಳಿತದ ಪರವಾಗಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಅವರು ಈ ಕಾಣಿಕೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೂ ಉಪಸ್ಥಿತರಿದ್ದರು.

ಸರಿಸುಮಾರು 100 ಕೆಜಿ ತೂಕವಿರುವ ಈ ಬೆಳ್ಳಿ ದೀಪಗಳನ್ನು ಶಾಶ್ವತ ದೀಪಗಳಾಗಿ ಬಳಸಲಾಗುತ್ತದೆ. ಹಗಲು-ರಾತ್ರಿ ದೇವಾಲಯದ ಗರ್ಭಗುಡಿಯಲ್ಲಿ ಬೆಳಗುತ್ತಿರುವ ಅಖಂಡ ದೀಪಗಳನ್ನು ದೈವಿಕತೆಯ ಶಾಶ್ವತ ಉಪಸ್ಥಿತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT