ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ದೆಹಲಿಯಲ್ಲಿ HD ಕುಮಾರಸ್ವಾಮಿ ಹೊಸ ಮನೆ ಗೃಹಪ್ರವೇಶ: ರಾಜಕೀಯ ಸಂಚಲನ!

ಕಾರ್ಯಕ್ರಮದಲ್ಲಿ ಕುಮಾರಸ್ವಾಮಿಯವರ ಸಹೋದರಿ ಅನಸೂಯಾ ಅವರ ಪತಿ ಮತ್ತು ಬೆಂಗಳೂರು ಗ್ರಾಮಾಂತರ ಸಂಸದೆ ಡಾ. ಸಿ.ಎನ್. ಮಂಜುನಾಥ್ ಗೈರುಹಾಜರಾಗಿದ್ದು ಎದ್ದು ಕಾಣುತ್ತಿತ್ತು.

ಬೆಂಗಳೂರು/ನವದೆಹಲಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕುಶಾಕ್ ರಸ್ತೆಯಲ್ಲಿರುವ ಹೊಸ ವಸತಿ ನಿಲಯದಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಸಿದ್ದು, ಈ ಮೂಲಕ ನವದೆಹಲಿಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ.

ಗೃಹಪ್ರವೇಶ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿಯವರ ತಂದೆ - ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಅವರ ಪುತ್ರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಸಹೋದರರು ಮತ್ತು ಸಹೋದರಿಯರು ಮತ್ತು ಎಚ್.ಡಿ. ಬಾಲಕೃಷ್ಣೇಗೌಡ ಸೇರಿದಂತೆ ಉಪಸ್ಥಿತರಿದ್ದರು.

ಇದಲ್ಲದೆ, ಒಂದು ಕಾಲದಲ್ಲಿ ಜನತಾದಳದ ನಿಷ್ಠಾವಂತ ನಾಯಕರಾಗಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಅವರೂ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶುಭ ಹಾರೈಸಿದರು.

ಇಲ್ಲಿಯವರೆಗೆ, ಕುಮಾರಸ್ವಾಮಿ ಅವರು ಉಕ್ಕಿನ ಸಚಿವಾಲಯದ ಅತಿಥಿಗೃಹದಲ್ಲಿ ತಂಗಿದ್ದರು. ಇದೀಗ ಕುಶಾಕ್ ರಸ್ತೆಯಲ್ಲಿರುವ ಹೊಸ ವಸತಿ ನಿಲಯದಲ್ಲಿ ತಂಗಲಿದ್ದಾರೆ. ಈ ಹೊಸ ವಸತಿ ನಿಲಯವು ದೆಹಲಿಯ ಹೃದಯಭಾಗದಲ್ಲಿದ್ದು, ರಾಷ್ಟ್ರೀಯ ವೇದಿಕೆಯಲ್ಲಿ ಕುಮಾರಸ್ವಾಮಿಯವರ ರಾಜಕೀಯ ಪ್ರಭಾವದ ಹೊಸ ಹಂತವನ್ನು ಸೂಚಿಸುತ್ತಿದೆ.

ಇನ್ನು ಕಾರ್ಯಕ್ರಮದಲ್ಲಿ ಕುಮಾರಸ್ವಾಮಿಯವರ ಸಹೋದರಿ ಅನಸೂಯಾ ಅವರ ಪತಿ ಮತ್ತು ಬೆಂಗಳೂರು ಗ್ರಾಮಾಂತರ ಸಂಸದೆ ಡಾ. ಸಿ.ಎನ್. ಮಂಜುನಾಥ್ ಗೈರುಹಾಜರಾಗಿದ್ದು ಎದ್ದು ಕಾಣುತ್ತಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಜುನಾಥ್ ಅವರು, ನನಗೆ ಇತರ ಪೂರ್ವ ನಿಗದಿತ ಕಾರ್ಯಕ್ರಮಗಳಿದ್ದ ಕಾರಣ ವೈಯಕ್ತಿಕವಾಗಿ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ, ಅವರಿಗೆ ಕರೆ ಮಾಡಿ ಶುಭ ಹಾರೈಸಿದ್ದೇನೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT