ಆತ್ಮಹತ್ಯೆ ಬೇಡ (ಸಾಂಕೇತಿಕ ಚಿತ್ರ) 
ರಾಜ್ಯ

ಕೌಟುಂಬಿಕ ಕಲಹ: PSI ಪತ್ನಿ ಆತ್ಮಹತ್ಯೆಗೆ ಶರಣು

ಸೋಮವಾರ ರಾತ್ರಿ ಎಚ್‌ಬಿಆರ್‌ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ಸಬ್‌ಇನ್ಸ್‌ಪೆಕ್ಟರ್‌ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೋವಿಂದಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಎಚ್‌ಬಿಆರ್‌ ಬಡಾವಣೆಯಲ್ಲಿ ಸೋಮವಾರ ನಡೆದಿದೆ.

ಕೆ.ಜಿ.ಹಳ್ಳಿ ಠಾಣೆಯ ಪಿಎಸ್‌ಐ ನಾಗರಾಜ್‌ ಅವರ ಪತ್ನಿ ಶಾಲಿನಿ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಸೋಮವಾರ ರಾತ್ರಿ ಎಚ್‌ಬಿಆರ್‌ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಾಲಿನಿ ಮೊದಲ ಪತಿಗೆ ವಿಚ್ಛೇದನ ನೀಡಿ ಬಳಿಕ ಕೆ.ಜಿ ಹಳ್ಳಿ ಪೊಲೀಸ್‌ ಠಾಣೆಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಕೆಲಸ ನಿರ್ವಹಿಸುತ್ತಿರುವ ನಾಗರಾಜ್‌ ಅವರನ್ನು ಎರಡನೇ ವಿವಾಹವಾಗಿದ್ದರು.

ಶಾಲಿನಿ ಹಾಗೂ ಪಿಎಸ್‌ಐ ನಾಗರಾಜ್‌ ಇಬ್ಬರೂ ಇಳಕಲ್‌ ಮೂಲದವರು. ಮೃತ ಶಾಲಿನಿಗೆ 7 ವರ್ಷದ ಮಗು ಇದೆ. ಇಬ್ಬರು ಹೈಸ್ಕೂಲ್‌ನಿಂದಲೇ ಸ್ನೇಹಿತರಾಗಿದ್ದರು. ನಂತರ ಶಾಲಿನಿ ಎಂಎಸ್‌ಸಿ ಹಾಗೂ ನಾಗರಾಜ್‌ ಎಂಜಿನಿಯರಿಂಗ್‌ ವ್ಯಾಸಂಗ ಮಾಡಿದ್ದರು. ಆ ಬಳಿಕ ನಾಗರಾಜ್‌ ಬೆಂಗಳೂರಿನಲ್ಲಿ ಪಿಎಸ್‌ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅದೇ ವೇಳೆ ಶಾಲಿನಿ ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್‌ಗೆ ಪಿಎಸ್‌ಐ ಪರೀಕ್ಷೆ ತಯಾರಿಗೆ ಆರ್ಥಿಕ ಸಹಾಯ ಕೂಡ ಮಾಡುತ್ತಿದ್ದರು ಎನ್ನಲಾಗಿದೆ.

ಹೀಗೆ ಮುಂದುವರಿಯುತ್ತಾ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. 2020ರಲ್ಲಿ ಪಿಎಸ್‌ಐ ಪರೀಕ್ಷೆ ಪಾಸ್‌ ಮಾಡಿದ್ದ ನಾಗರಾಜ್‌, ಶಾಲಿನಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದ. ಈ ಸಂಬಂಧ ಮದುವೆ ಆಗದೆ ಮೋಸ ಮಾಡುತ್ತಿದ್ದಾನೆಂದು ಕೋಣನಕುಂಟೆ ಠಾಣೆಯಲ್ಲಿ ನಾಗರಾಜ್‌ ವಿರುದ್ಧ ಶಾಲಿನಿ ದೂರು ನೀಡಿದ್ದರು. ಆಗ ಹಿರಿಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಿದ್ದರು. ನಂತರ ನಾಗರಾಜ್‌ ಶಾಲಿನಿಯನ್ನು ವಿವಾಹವಾಗಿ ಎಚ್‌ಬಿಆರ್‌ ಲೇಔಟ್‌ನಲ್ಲಿ ವಾಸವಾಗಿದ್ದರು. ಆರಂಭದಲ್ಲಿ ಇಬ್ಬರ ದಾಂಪತ್ಯ ಜೀವನ ಚೆನ್ನಾಗಿಯೇ ಇತ್ತು. ಆದರೆ, ಕೆಲ ತಿಂಗಳಿಂದ ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.

ಶಾಲಿನಿ, ನಿನ್ನೆ ರಾತ್ರಿ ಕೂಡ ರೈಲಿಗೆ ಸಿಕ್ಕಿ ಸಾಯ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದರು. ಈ ವೇಳೆ ಹೊಯ್ಸಳ ಸಿಬ್ಬಂದಿ ಶಾಲಿನಿ ಅವರನ್ನ ರಕ್ಷಿಸಿ ಮನೆಗೆ ಬಿಟ್ಟು ತೆರಳಿದ್ದರು. ಆ ಬಳಿಕ ಶಾಲಿನಿ ಮನೆಯಲ್ಲೇ ಆತ್ಮಹ ತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಗೋವಿಂದಪುರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT