ಸಂಗ್ರಹ ಚಿತ್ರ 
ರಾಜ್ಯ

ರಾಮನಗರದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳದಂತೆ ದಲಿತರಿಗೆ ಬಹಿಷ್ಕಾರ; ದಿನಸಿ-ಕೆಲಸ ಕೊಡದಂತೆ ಡಂಗೂರ!

ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯ ಬನವಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ನಾಡಿನಲ್ಲಿ ಅಸ್ಪೃಶ್ಯತೆ ಪಿಡುಗು ಇನ್ನೂ ದೂರವಾಗಿಲ್ಲ. ರಾಮನಗರ ಜಿಲ್ಲೆಯಲ್ಲಿ ಜಾತಿ ಪದ್ಧತಿ ಇನ್ನೂ ಜೀವಂತವಾಗಿದ್ದು, ಇದಕ್ಕೆ ಮತ್ತೊಂದು ಉದಾಹರಣೆ ಸಾಕ್ಷಿಯಾಗಿದೆ. ಗ್ರಾಮದ ಮಾರಮ್ಮನ ಹಬ್ಬದಲ್ಲಿ ಭಾಗವಹಿಸಲು ತಮಗೂ ಸಮಾನ ಅವಕಾಶ ನೀಡಬೇಕು ಎಂದು ಕೇಳಿದ ತಾಲ್ಲೂಕಿನ ಬನವಾಸಿ ಗ್ರಾಮದ ದಲಿತರಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆಯೊಂದು ವರದಿಯಾಗಿದೆ.

ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯ ಬನವಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮದ ಮಾರಮ್ಮನ ಹಬ್ಬದಲ್ಲಿ ಭಾಗವಹಿಸಲು ತಮಗೂ ಸಮಾನ ಅವಕಾಶ ನೀಡಬೇಕು ಎಂದು ಕೇಳಿದ ಹಿನ್ನೆಲೆಯಲ್ಲಿ ದಲಿತರಿಗೆ ಸವರ್ಣೀಯರು ಬಹಿಷ್ಕಾರ ಹಾಕಿದ್ದಾರೆನ್ನಲಾಗಿದೆ.

ಅಲ್ಲದೆ, ಗ್ರಾಮದ ಅಂಗಡಿಗಳಲ್ಲಿ ದಲಿತರಿಗೆ ದಿನಸಿ ಸಾಮಾನು ಕೊಡಬಾರದು, ಡೇರಿಗಳಲ್ಲಿ ಹಾಲು ಹಾಕಿಸಿಕೊಳ್ಳಬಾರದು ಮತ್ತು ನೀಡಬಾರದು, ಶುದ್ಧ ಕುಡಿಯುವ ನೀರು ಮುಟ್ಟಲು ಬಿಡಬಾರದು ಹಾಗೂ ಕೃಷಿ ಕೆಲಸಗಳಿಗೆ ದಲಿತರನ್ನು ಕರೆಯಬಾರದು, ನಿಯಮ ಉಲ್ಲಂಘಿಸಿದವರು ರೂ.10 ಸಾವಿರ ದಂಡ ಕಟ್ಟಬೇಕು ಎಂದು ಗ್ರಾಮದಲ್ಲಿ ಡಂಗೂರ ಸಾರಿಸಿದ್ದಾರೆಂದು ಹೇಳಲಾಗುತ್ತಿದೆ.

ಹಬ್ಬ ಆಚರಣೆ ಕುರಿತು ಬನವಾಸಿ, ಜುಟ್ಟೇಗೌಡನವಲಸೆ ಹಾಗೂ ವಡೇರಹಳ್ಳಿ ಗ್ರಾಮದ ಮುಖಂಡರ ಸಭೆ ನಡೆದಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಸವರ್ಣೀಯ ಮುಖಂಡರು, ‘ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ದಲಿತರು ಹಬ್ಬದಲ್ಲಿ ಭಾಗವಹಿಸಬಾರದು’ ಎಂದು ತಾಕೀತು ಮಾಡಿದ್ದರು. ಇದಕ್ಕೆ ಆಕ್ಷೇಪಿಸಿದ್ದ ದಲಿತರು, ‘ಹೀಗೆ ಹೇಳುವುದು ಕಾನೂನಿಗೆ ವಿರುದ್ಧವಾಗುತ್ತದೆ. ನಾವು ಸಹ ನಿಮ್ಮೊಂದಿಗೆ ಸಾಮರಸ್ಯದಿಂದ ಹಬ್ಬದಲ್ಲಿ ಪಾಲ್ಗೊಳ್ಳಲು ಅವಕಾಶ ಕೊಡಿ’ ಎಂದಿದ್ದರು.

ಇದರಿಂದ ಕೆರಳಿದ ಸವರ್ಣೀಯರು ಸಭೆಯಲ್ಲಿ ದಲಿತರನ್ನು ನಿಂದಿಸಿದ್ದರು. ಇದರಿಂದ ನೊಂದ ದಲಿತರು ಸಭೆಯಿಂದ ಹೊರನಡೆದಿದ್ದರು.

ಸಭೆ ಮುಗಿದ ಬಳಿಕ ಮೂರು ಗ್ರಾಮಗಳ ಸವರ್ಣೀಯ ಮುಖಂಡರು, ಬನವಾಸಿಯ 12 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಬಳಿಕ ದಲಿತರು ನಾಯಕರು ಈ ವಿಷಯವನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ನಂತರ, ಸಮಾಜ ಕಲ್ಯಾಣ ಇಲಾಖೆ, ಪೊಲೀಸರು ಮತ್ತು ತಹಶೀಲ್ದಾರ್ ಅಧಿಕಾರಿಗಳು ಸಭೆ ನಡೆಸಿ ಸಮಸ್ಯೆಯನ್ನು ಪರಿಹರಿಸಿದರು. ಆದರೆ, ಗ್ರಾಮಸ್ಥರು ಔಪಚಾರಿಕ ದೂರು ದಾಖಲಿಸಲು ನಿರಾಕರಿಸಿದ್ದಾರೆಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT