ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ 
ರಾಜ್ಯ

ED raids: ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಡಾ. ಜಿ ಪರಮೇಶ್ವರ!

ನಿಖರವಾದ ವಿವರಗಳು ತಿಳಿದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಯುತ್ತಿರುವ ನಡುವೆಯೇ ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಿಖರವಾದ ವಿವರಗಳು ತಿಳಿದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಚಿನ್ನದ ಕಳ್ಳಸಾಗಣೆ ದಂಧೆ ಸೇರಿದಂತೆ ಅಕ್ರಮ ಹಣಕಾಸು ವಹಿವಾಟು ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಚಿನ್ನ ಕಳ್ಳ ಸಾಗಣೆ ಆರೋಪಿ, ನಟಿ ರನ್ಯಾರಾವ್ ಖಾತೆಗೆ ಹವಾಲಾ ಹಣ ವರ್ಗಾವಣೆ ಮಾಡಿದವರನ್ನು ಗುರಿಯಾಗಿಸಿಕೊಂಡು ED ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ಪರಮೇಶ್ವರ ಅವರಿಗೆ ಸಂಬಂಧಿಸಿದ ಮೂರು ಶಿಕ್ಷಣ ಸಂಸ್ಥೆಗಳೂ ಸೇರಿವೆ.

ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಸೇರಿದಂತೆ ಮೂರು ಸಂಸ್ಥೆಗಳಿಗೆ ED ಅಧಿಕಾರಿಗಳು ಭೇಟಿ ನೀಡಿದ್ದು, ಕಳೆದ ಐದು ವರ್ಷಗಳ ಆರ್ಥಿಕ ದಾಖಲೆಗಳನ್ನು ಕೋರಿದ್ದಾರೆ ಎಂದು ಪರಮೇಶ್ವರ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರು ದಾಳಿಯ ನಂತರ ಪರಮೇಶ್ವರ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

"ನಾವೆಲ್ಲರೂ ಸಾರ್ವಜನಿಕ ಜೀವನದಲ್ಲಿ ಇದ್ದೇವೆ. ಅನೇಕ ಜನರು ಟ್ರಸ್ಟ್‌ಗಳನ್ನು ನಡೆಸುತ್ತಿದ್ದು, ಅವರು ಮದುವೆಗೆ ಹಣವನ್ನು ಉಡುಗೊರೆಯಾಗಿ ನೀಡಿರಬಹುದು. ಪರಮೇಶ್ವರ ಅವರಂತಹ ಪ್ರಭಾವಿ ನಾಯಕ ಕಳ್ಳಸಾಗಣೆಯಲ್ಲಿ ತೊಡಗಬಹುದೇ?" ಎಂದು ಶಿವಕುಮಾರ್ ಪ್ರಶ್ನಿಸಿದರು.

ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬಂದ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದು 14.2 ಕೆಜಿ ತೂಕದ 12.56 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ