ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ 
ರಾಜ್ಯ

ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಯಾಕೆ? BJP ನಾಯಕರೆಲ್ಲಾ ಪ್ರಾಮಾಣಿಕರೇ?: ED ಗೆ ಸಿದ್ದರಾಮಯ್ಯ ಪ್ರಶ್ನೆ

ಕಾಂಗ್ರೆಸ್ ನಾಯಕರನ್ನು ಮಾತ್ರ ಜಾರಿ ನಿರ್ದೇಶನಾಲಯವೇಕೆ ಗುರಿಯಾಗಿಸಿಕೊಂಡಿದೆ? ಎಲ್ಲಾ ಬಿಜೆಪಿ ನಾಯಕರು ಪ್ರಾಮಾಣಿಕರೇ ಎಂದು ಪ್ರಶ್ನಿಸಿದರು.

ಬೆಂಗಳೂರು: ಪರಮೇಶ್ವರ್ ಒಬ್ಬ ದಲಿತ ನಾಯಕರ, ಹೀಗಾಗಿ ಸೇಡಿನ ರಾಜಕಾರಣ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.

ಬುಧವಾರ ತಮ್ಮ ಅಧಿಕೃತ ನಿವಾಸ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಪರಮೇಶ್ವರ್ ಒಡೆತದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿರುವುದರ ಕುರಿತು ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ನಾಯಕರನ್ನು ಮಾತ್ರ ಜಾರಿ ನಿರ್ದೇಶನಾಲಯವೇಕೆ ಗುರಿಯಾಗಿಸಿಕೊಂಡಿದೆ? ಎಲ್ಲಾ ಬಿಜೆಪಿ ನಾಯಕರು ಪ್ರಾಮಾಣಿಕರೇ ಎಂದು ಪ್ರಶ್ನಿಸಿದರು.

ಪರಮೇಶ್ವರ್ ದಲಿತ ನಾಯಕರು. ರಾಜ್ಯದ ಗೃಹ ಸಚಿವರು. ಅವರನ್ನು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗಿದೆ. ಯಡಿಯೂರಪ್ಪ ಹಾನೆಸ್ಟಾ? ವಿಜಯೇಂದ್ರ ಹಾನೆಸ್ಟಾ? ಕುಮಾರಸ್ವಾಮಿ ಹಾನೆಸ್ಟಾ? ಅವರ ಮೇಲೆ ರೇಡ್ ಯಾಕಿಲ್ಲಾ? ಕಾಂಗ್ರೆಸ್‌ನ ಹಿಂದುಳಿದ ದಲಿತ ನಾಯಕರ ಮೇಲೆ ದಾಳಿ ಆಗುತ್ತಿದೆ. ದಲಿತ ನಾಯಕರ ಗುರಿ ಮಾಡಿದ್ದಾರೆ ಎನಿಸುತ್ತಿದೆ. ಮೊದಲು ಐಟಿಯವರು ಮಾಡಿದ್ದರು, ಈಗ ಇಡಿ ಮಾಡಿದ್ದಾರೆಂದು ಹೇಳಿದರು.

ಪರಮೇಶ್ವರ್ ಪ್ರಕರಣಕ್ಕೆ ರನ್ಯಾ ರಾವ್ ಕೇಸ್ ಲಿಂಕ್ ಆರೋಪ ಬಗ್ಗೆ ಮಾತನಾಡಿ, ಅಶೋಕ್ ಗಂಭೀರವಾಗೇ ಇಲ್ಲ. ಗಂಭೀರ ಆರೋಪ ಹೇಗೆ ಮಾಡುತ್ತಾರೆ? ಅಶೋಕ್ ಅವರೇ ಇಡಿ ದಾಳಿ ಮಾಡಿಸಿರಬಹುದು ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT