ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ 
ರಾಜ್ಯ

ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಯಾಕೆ? BJP ನಾಯಕರೆಲ್ಲಾ ಪ್ರಾಮಾಣಿಕರೇ?: ED ಗೆ ಸಿದ್ದರಾಮಯ್ಯ ಪ್ರಶ್ನೆ

ಕಾಂಗ್ರೆಸ್ ನಾಯಕರನ್ನು ಮಾತ್ರ ಜಾರಿ ನಿರ್ದೇಶನಾಲಯವೇಕೆ ಗುರಿಯಾಗಿಸಿಕೊಂಡಿದೆ? ಎಲ್ಲಾ ಬಿಜೆಪಿ ನಾಯಕರು ಪ್ರಾಮಾಣಿಕರೇ ಎಂದು ಪ್ರಶ್ನಿಸಿದರು.

ಬೆಂಗಳೂರು: ಪರಮೇಶ್ವರ್ ಒಬ್ಬ ದಲಿತ ನಾಯಕರ, ಹೀಗಾಗಿ ಸೇಡಿನ ರಾಜಕಾರಣ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.

ಬುಧವಾರ ತಮ್ಮ ಅಧಿಕೃತ ನಿವಾಸ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಪರಮೇಶ್ವರ್ ಒಡೆತದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿರುವುದರ ಕುರಿತು ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ನಾಯಕರನ್ನು ಮಾತ್ರ ಜಾರಿ ನಿರ್ದೇಶನಾಲಯವೇಕೆ ಗುರಿಯಾಗಿಸಿಕೊಂಡಿದೆ? ಎಲ್ಲಾ ಬಿಜೆಪಿ ನಾಯಕರು ಪ್ರಾಮಾಣಿಕರೇ ಎಂದು ಪ್ರಶ್ನಿಸಿದರು.

ಪರಮೇಶ್ವರ್ ದಲಿತ ನಾಯಕರು. ರಾಜ್ಯದ ಗೃಹ ಸಚಿವರು. ಅವರನ್ನು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗಿದೆ. ಯಡಿಯೂರಪ್ಪ ಹಾನೆಸ್ಟಾ? ವಿಜಯೇಂದ್ರ ಹಾನೆಸ್ಟಾ? ಕುಮಾರಸ್ವಾಮಿ ಹಾನೆಸ್ಟಾ? ಅವರ ಮೇಲೆ ರೇಡ್ ಯಾಕಿಲ್ಲಾ? ಕಾಂಗ್ರೆಸ್‌ನ ಹಿಂದುಳಿದ ದಲಿತ ನಾಯಕರ ಮೇಲೆ ದಾಳಿ ಆಗುತ್ತಿದೆ. ದಲಿತ ನಾಯಕರ ಗುರಿ ಮಾಡಿದ್ದಾರೆ ಎನಿಸುತ್ತಿದೆ. ಮೊದಲು ಐಟಿಯವರು ಮಾಡಿದ್ದರು, ಈಗ ಇಡಿ ಮಾಡಿದ್ದಾರೆಂದು ಹೇಳಿದರು.

ಪರಮೇಶ್ವರ್ ಪ್ರಕರಣಕ್ಕೆ ರನ್ಯಾ ರಾವ್ ಕೇಸ್ ಲಿಂಕ್ ಆರೋಪ ಬಗ್ಗೆ ಮಾತನಾಡಿ, ಅಶೋಕ್ ಗಂಭೀರವಾಗೇ ಇಲ್ಲ. ಗಂಭೀರ ಆರೋಪ ಹೇಗೆ ಮಾಡುತ್ತಾರೆ? ಅಶೋಕ್ ಅವರೇ ಇಡಿ ದಾಳಿ ಮಾಡಿಸಿರಬಹುದು ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT