ಮಾಂಗಲ್ಯಧಾರಣೆ ವೇಳೆಯ ಚಿತ್ರ 
ರಾಜ್ಯ

ಹಾಸನ: ಮುಹೂರ್ತಕ್ಕೂ ಮುನ್ನ ಪ್ರಿಯಕರನಿಂದ ಕರೆ; ಮಾಂಗಲ್ಯಧಾರಣೆ ವೇಳೆ ಮದುವೆಗೆ ಒಪ್ಪದ ವಧು; ಗರಬಡಿದಂತೆ ನಿಂತ ವರ!

ಗದ್ದಲ ಗಲಾಟೆ ನಡುವೆ ಮದುವೆಯೇ ನಿಂತು ಹೋಗಿದ್ದು ಪೊಲೀಸರ ಮಧ್ಯಸ್ಥಿತಿಕೆಯಲ್ಲಿ ರಾಜಿ ಸಂಧಾನ ನಡೆಯಿತು.

ಹಾಸನ: ರಾಜ್ಯದಲ್ಲಿ ಇತ್ತೀಚೆಗೆ ಮದುವೆ ಮಂಟಪದಲ್ಲಿ ಕೊನೆಯ ಕ್ಷಣಗಳಲ್ಲಿ ಮದುವೆಗಳು ಮುರಿದು ಬೀಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಅದಕ್ಕೆ ಸೇರ್ಪಡೆಯೆಂಬಂತೆ ಹಾಸನದಲ್ಲಿ ಪ್ರಕರಣವೊಂದು ನಡೆದಿದೆ. ಶುಭ ಮುಹೂರ್ತದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧು ನನಗೆ ಈ ಮದುವೆ ಇಷ್ಟ ಇಲ್ಲ ಅಂತ ಹೇಳಿದ್ದು ಮದುವೆ ಮುರಿದುಬಿದ್ದಿದೆ.

ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಮದುವೆ ಮುಹೂರ್ತಕ್ಕೂ ಮುನ್ನ ಯುವತಿಗೆ ಆಕೆಯ ಪ್ರಿಯಕರ ಕರೆ ಮಾಡಿದ್ದನು. ಆದಾದ ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ವಧು ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ಘಟನೆ ವರನಿಗೆ ಆಘಾತ ತಂದಿದ್ದು ಮಾಂಗಲ್ಯಸರವನ್ನು ಕೈಯಲ್ಲೇ ಹಿಡಿದು ಗರಬಡಿದವನಂತೆ ನಿಂತಿದ್ದನು. ಇನ್ನು ತಮ್ಮ ಮಗಳ ಮನವೊಲಿಸಲು ಪೋಷಕರು, ಸಂಬಂಧಿಕರು ಎಷ್ಟೇ ಪ್ರಯತ್ನಿಸಿದರು. ಇದಕ್ಕೆ ವಧುವಿನ ಮನಸ್ಸು ಕರಗಲಿಲ್ಲ.

ಇದನ್ನು ನೋಡಿದ ವರ ಕೂಡ ಕೊನೆಗೆ ನನಗೆ ಈ ಮದುವೆ ಬೇಡ ಎಂದು ಕಣ್ಣೀರು ಹಾಕಿದ್ದಾನೆ. ಗದ್ದಲ ಗಲಾಟೆ ನಡುವೆ ಮದುವೆಯೇ ನಿಂತು ಹೋಗಿದ್ದು ಪೊಲೀಸರ ಮಧ್ಯಸ್ಥಿತಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಮೂರು ತಿಂಗಳ ಮುಂಚೆಯೇ ಮದುವೆ ನಿಶ್ಚಯವಾಗಿತ್ತು. ಆದರೂ ವಧು ಕೊನೆಯ ಕ್ಷಣದಲ್ಲಿ ತನಗೆ ಮದುವೆ ಬೇಡ ಎಂದು ಹೇಳಿದ್ದರ ವಿರುದ್ಧ ವರನ ಕಡೆಯವರು ಅಸಮಾಧಾನ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT