ಮಧು ಬಂಗಾರಪ್ಪ 
ರಾಜ್ಯ

2025-26ನೇ ಶೈಕ್ಷಣಿಕ ವರ್ಷಕ್ಕೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಒಪ್ಪಿಗೆ

ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಶುಕ್ರವಾರ ಆದೇಶಿಸಿದೆ.

ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ. ಮೇ 29 ರಂದು ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾದಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ನಿಗದಿತ ಸಮಯಕ್ಕೆ ಪುನರಾರಂಭವಾಗುವಂತೆ ಮತ್ತು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಉದ್ದೇಶದಿಂದ ಸರ್ಕಾರ ನೇಮಕಕ್ಕೆ ಮುಂದಾಗಿದೆ.

ಈ ಹಂಚಿಕೆಯು ರಾಜ್ಯದ ಮೂಲಭೂತ ಮತ್ತು ಮಾಧ್ಯಮಿಕ ಶಿಕ್ಷಣದ ಹಂತಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ. ನೇಮಕಾತಿಗಳು ತಾತ್ಕಾಲಿಕ ಸ್ವರೂಪದ್ದಾಗಿರುತ್ತವೆ, ನಿಯಮಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಇರುತ್ತದೆ. ಬೋಧನಾ ಸಿಬ್ಬಂದಿಯಲ್ಲಿನ ತಕ್ಷಣದ ಅಂತರವನ್ನು ಕಡಿಮೆ ಮಾಡಲು ಮತ್ತು ಶಿಕ್ಷಕರ ಕೊರತೆಯಿಂದಾಗಿ ನಮ್ಮ ವಿದ್ಯಾರ್ಥಿಗಳು ತೊಂದರೆ ಅನುಭವಿಸದಂತೆ ನೋಡಿಕೊಳ್ಳಲು ಈ ನಿರ್ಧಾರವು ನಿರ್ಣಾಯಕವಾಗಿದೆ" ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಹೊಸ ಶೈಕ್ಷಣಿಕ ವರ್ಷದ ಮೊದಲ ದಿನದಿಂದಲೇ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದರು. ಈ 51,000 ಅತಿಥಿ ಶಿಕ್ಷಕರುಗಳ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಉಪನ್ಯಾಸಕರ ಜಿಲ್ಲಾ/ತಾಲೂಕುವಾರು ವಿವರಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖಾ ಆಯುಕ್ತರು, ಅಪರ ಆಯುಕ್ತರು ಮತ್ತು ನಿರ್ದೇಶಕರುಗಳಿಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT